ವೈದ್ಯಲೋಕವೇ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಿಸಿದ ಆಶಾ ಕಾರ್ಯಕರ್ತೆ| ಗರ್ಭದಿಂದ ಹೊರಬಂದ ಮಗುವನ್ನು ಎಳೆದ ರಭಸಕ್ಕೆ ತಲೆಯೇ ತುಂಡಾಯ್ತು!!
ಸಮಗ್ರ ನ್ಯೂಸ್: ವೈದ್ಯಕೀಯಲೋಕವೇ ತಲೆತಗ್ಗಿಸುವಂತಹ, ಮನುಕುಲವೇ ಬೆಚ್ಚಿಬೀಳುವಂತಹ ಘೋರ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿಯ ಅತಿಯಾದ ಆತ್ಮವಿಶ್ವಾಸ ಮತ್ತು ಅಮಾನವೀಯ ನಿರ್ಲಕ್ಷ್ಯಕ್ಕೆ ಏಳು ತಿಂಗಳ ಹಸುಗೂಸು ಬಲಿಯಾಗಿದ್ದಲ್ಲದೆ, ಮಗುವಿನ ಕತ್ತರಿಸಿದ ತಲೆ ತಾಯಿಯ ಗರ್ಭದಲ್ಲೇ ಉಳಿದ ಭೀಕರ ಘಟನೆ ವರದಿಯಾಗಿದೆ. ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆಗೆ ತಲುಪಲು ಇನ್ನು ಕೆಲವೇ […]









