April 2026

ವೈದ್ಯಲೋಕವೇ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಿಸಿದ ಆಶಾ ಕಾರ್ಯಕರ್ತೆ| ಗರ್ಭದಿಂದ ಹೊರಬಂದ ಮಗುವನ್ನು ಎಳೆದ ರಭಸಕ್ಕೆ ತಲೆಯೇ ತುಂಡಾಯ್ತು!!

ಸಮಗ್ರ ನ್ಯೂಸ್: ವೈದ್ಯಕೀಯಲೋಕವೇ ತಲೆತಗ್ಗಿಸುವಂತಹ, ಮನುಕುಲವೇ ಬೆಚ್ಚಿಬೀಳುವಂತಹ ಘೋರ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿಯ ಅತಿಯಾದ ಆತ್ಮವಿಶ್ವಾಸ ಮತ್ತು ಅಮಾನವೀಯ ನಿರ್ಲಕ್ಷ್ಯಕ್ಕೆ ಏಳು ತಿಂಗಳ ಹಸುಗೂಸು ಬಲಿಯಾಗಿದ್ದಲ್ಲದೆ, ಮಗುವಿನ ಕತ್ತರಿಸಿದ ತಲೆ ತಾಯಿಯ ಗರ್ಭದಲ್ಲೇ ಉಳಿದ ಭೀಕರ ಘಟನೆ ವರದಿಯಾಗಿದೆ. ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆಗೆ ತಲುಪಲು ಇನ್ನು ಕೆಲವೇ […]

ವೈದ್ಯಲೋಕವೇ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಿಸಿದ ಆಶಾ ಕಾರ್ಯಕರ್ತೆ| ಗರ್ಭದಿಂದ ಹೊರಬಂದ ಮಗುವನ್ನು ಎಳೆದ ರಭಸಕ್ಕೆ ತಲೆಯೇ ತುಂಡಾಯ್ತು!! Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎ.17ಕ್ಕೆ ತೀರ್ಪು ಪ್ರಕಟ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಮಹಮ್ಮದ್ ಶಾರಿಕ್‌ಗೆ ಶಿಕ್ಷೆಯ ಪ್ರಮಾಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯವು ಏಪ್ರಿಲ್ 17 ರಂದು ಪ್ರಕಟಿಸಲಿದೆ. ಮೂರು ತಿಂಗಳ ಹಿಂದೆ ಮೊಹಮ್ಮದ್ ಶಾರಿಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಇತ್ತೀಚೆಗೆ ಸ್ವೀಕರಿಸಿದೆ. ಶುಕ್ರವಾರವೂ ಪ್ರಕರಣದ ಹೆಚ್ಚಿನ ವಿಚಾರಣೆ ನಡೆದಿದ್ದು, ಈ ಸಂದರ್ಭದಲ್ಲಿ ಆರೋಪಿಗೆ ವಿಧಿಸಲಾಗುವ ಶಿಕ್ಷೆಯನ್ನು ಏಪ್ರಿಲ್ 17 ರಂದು

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಎ.17ಕ್ಕೆ ತೀರ್ಪು ಪ್ರಕಟ Read More »

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಸಾರ್ವಜನಿಕವಾಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ನರೇಂದ್ರ ಮೃತಪಟ್ಟ ದುರ್ದೈವಿ. ಇವರು ಕಳೆದ ಏಪ್ರಿಲ್ 11ರಂದು ಶನಿವಾರ ಸಂಜೆ ಧರ್ಮಸ್ಥಳದ ನೇತ್ರಾವತಿ ನದಿಯ ಸ್ನಾನಘಟ್ಟದ ಸಮೀಪ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಏಪ್ರಿಲ್ 11ರ ಸಂಜೆ ವೇಳೆ ಸ್ನಾನಘಟ್ಟದ ಬಳಿ ಬಂದಿದ್ದ ನರೇಂದ್ರ ಅವರು, ಕ್ಯಾನ್‌ನಲ್ಲಿದ್ದ ಪೆಟ್ರೋಲನ್ನು ಮೈಮೇಲೆ ಸುರಿದುಕೊಂಡು ಬೆಂಕಿ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು Read More »

ಬಿಹಾರ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ‌ ನೇಮಕ

ಸಮಗ್ರ ನ್ಯೂಸ್: ಬಿಹಾರ ರಾಜಕೀಯದಲ್ಲಿ ಮಂಗಳವಾರ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಸುಮಾರು ಎರಡು ದಶಕಗಳ ಕಾಲ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬೆನ್ನಲ್ಲೇ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡ ಹಾಗೂ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಬಿಹಾರ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಂಪೂರ್ಣ ಸಜ್ಜಾಗಿದ್ದಾರೆ. ವಿಶೇಷವೆಂದರೆ, ಬಿಹಾರದ ರಾಜಕೀಯ ಇತಿಹಾಸದಲ್ಲಿ

ಬಿಹಾರ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ‌ ನೇಮಕ Read More »

ಇಶಾನ್ ಕಿಶನ್ ಅಬ್ಬರ| ರಾಜಸ್ತಾನ ರಾಯಲ್ಸ್ ವಿರುದ್ದ ಗೆದ್ದು ಬೀಗಿದ ಎಸ್ಆರ್ ಹೆಚ್

ಸಮಗ್ರ ನ್ಯೂಸ್: ನಾಯಕ ಇಶಾನ್ ಕಿಶನ್ (91;44ಎ) ಅವರ ಮಿಂಚಿನ ಬ್ಯಾಟಿಂಗ್‌ ಬಳಿಕ ಮಧ್ಯಮ ವೇಗಿಗಳಾದ ಪ್ರಫುಲ್‌ ಹಿಂಗೆ ಮತ್ತು ಸಾಕಿಬ್ ಹುಸೇನ್ ಅವರು ಐಪಿಎಲ್‌ ಪದಾರ್ಪಣೆ ಪಂದ್ಯವನ್ನು ಸ್ಮರಣೀಯ ವಾಗಿಸಿಕೊಂಡರು. ಈ ಮೂವರ ಆಟದ ನೆರವಿನಿಂದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಗೆಲುವಿನ ಹಳಿಗೆ ಮರಳಿತು. ರಾಜೀವಗಾಂಧಿ ಕ್ರೀಡಾಂಗಣದಲ್ಲಿಸೋಮವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡವು ರಾಜಸ್ಥಾನ ರಾಯಲ್ಸ್‌ ವಿರುದ್ಧ 57 ರನ್‌ಗಳ ಸುಲಭ ಗೆಲುವು ದಾಖಲಿಸಿತು. ಸತತ ನಾಲ್ಕು ಪಂದ್ಯಗಳನ್ನು ಗೆದ್ದಿದ್ದ ರಿಯಾನ್‌ ಪರಾಗ್‌ ಪಡೆ ಹಾಲಿ

ಇಶಾನ್ ಕಿಶನ್ ಅಬ್ಬರ| ರಾಜಸ್ತಾನ ರಾಯಲ್ಸ್ ವಿರುದ್ದ ಗೆದ್ದು ಬೀಗಿದ ಎಸ್ಆರ್ ಹೆಚ್ Read More »

ಮಹಾರಾಷ್ಟ್ರದ ಸತಾರಾದಲ್ಲಿ ಅಪಘಾತ| ಬೆಳಗಾವಿಯ ನಾಲ್ವರು ಸಾವು

ಸಮಗ್ರ ನ್ಯೂಸ್: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯ ಡಾ. ಸಚಿನ್‌ ಶಂಕರಗೌಡ ಪಾಟೀಲ್ ಅವರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿದ್ದಾರೆಯೇ ಎಂಬುದೂ ಸ್ಪಷ್ಟವಾಗಿಲ್ಲ.ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ

ಮಹಾರಾಷ್ಟ್ರದ ಸತಾರಾದಲ್ಲಿ ಅಪಘಾತ| ಬೆಳಗಾವಿಯ ನಾಲ್ವರು ಸಾವು Read More »

ಇರಾನ್ ಗೆ ಸಂಪೂರ್ಣ ಬೆಂಬಲ ಸೂಚಿಸಿದ ಚೀನಾ| ಆಮೇರಿಕಾಕ್ಕೆ ತಿರುಗೇಟು ನೀಡಿದ ಡ್ರ್ಯಾಗನ್

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ ಜಾಗತಿಕ ರಾಜಕೀಯ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಆಯಕಟ್ಟಿನ ಪ್ರದೇಶವಾದ ಹೋರ್ಮಝ್ ಜಲಸಂಧಿಯ ಮೇಲೆ ಹಿಡಿತ ಸಾಧಿಸಲು ಅಮೆರಿಕ ನಡೆಸುತ್ತಿರುವ ಪ್ರಯತ್ನಗಳಿಗೆ ಈಗ ಚೀನಾ ಬ್ರೇಕ್ ಹಾಕಲು ಮುಂದಾಗಿದೆ. ಇರಾನ್ಗೆ ತನ್ನ ಸಂಪೂರ್ಣ ಬೆಂಬಲ ಘೋಷಿಸುವ ಮೂಲಕ ಚೀನಾ, ಅಮೆರಿಕಕ್ಕೆ ನೇರ ಎಚ್ಚರಿಕೆ ನೀಡಿದೆ. ವಿಶ್ವದ ಒಟ್ಟು ತೈಲ ವ್ಯಾಪಾರದ ಬಹುಪಾಲು ನಡೆಯುವ ಹೋರ್ಮಝ್ ಜಲಸಂಧಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅಮೆರಿಕ ನೌಕಾಪಡೆ ಸಜ್ಜಾಗುತ್ತಿದೆ ಎಂಬ ವರದಿಗಳಿದ್ದವು. ಇರಾನ್

ಇರಾನ್ ಗೆ ಸಂಪೂರ್ಣ ಬೆಂಬಲ ಸೂಚಿಸಿದ ಚೀನಾ| ಆಮೇರಿಕಾಕ್ಕೆ ತಿರುಗೇಟು ನೀಡಿದ ಡ್ರ್ಯಾಗನ್ Read More »

ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು

ಸಮಗ್ರ ನ್ಯೂಸ್: ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಅನಿಕೇತ್ (14) ಮೃತಪಟ್ಟ ದುರ್ದೈವಿ. ಜಯಪುರದ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಅನಿಕೇತ್ ವ್ಯಾಸಂಗ ಮಾಡುತ್ತಿದ್ದ. ರವಿವಾರ ಮಧ್ಯಾಹ್ನ ಶಿಕ್ಷಕರ ತಂಡದೊಂದಿಗೆ ಈಜುಕೊಳಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ

ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು Read More »

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯಂತೆ ಮೇ 29, 2026 ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 29ರಿಂದಲೇ ಶಾಲೆಗಳು ಪುನರಾರಂಭಗೊಳ್ಳಲಿವೆ. ಒಟ್ಟು 245 ದಿನಗಳ ಶಾಲಾ ಕರ್ತವ್ಯದ ಅವಧಿಯಲ್ಲಿ ದಸರಾ ಮತ್ತು

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ Read More »

ವಿಫಲವಾದ ಶಾಂತಿ ಮಾತುಕತೆ| ಹಾರ್ಮೋಜ್ ಜಲಸಂಧಿಗೆ ನೌಕಾ ದಿಗ್ಭಂಧನ

ಸಮಗ್ರ ನ್ಯೂಸ್: ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಮತ್ತೊಮ್ಮೆ ಕಠಿಣ ನಿಲುವು ತಾಳಿದ್ದು, ಜಾಗತಿಕವಾಗಿ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾಗಿರುವ ಹಾರ್ಮುಜ್ ಮೇಲೆ ನೌಕಾ ದಿಗ್ಭಂಧನ ಹೇರಿದ್ದಾರೆ. ಪ್ರಮುಖ ಸಮುದ್ರ ಮಾರ್ಗವಾಗಿರುವ ಹಾರ್ಮುಜ್ ಜಗತ್ತಿನ ಒಟ್ಟು ಕಚ್ಚಾ ತೈಲ ಸಾಗಣೆಯ ಸುಮಾರು 20 ಶೇಕಡಾ ಪಾಲನ್ನು ಹೊತ್ತಿರುತ್ತದೆ. ಇಂತಹ ಪ್ರಮುಖ ಮಾರ್ಗದಲ್ಲಿ ಅಮೆರಿಕಾ ನೌಕಾಪಡೆ ತಡೆಗಟ್ಟುವಿಕೆ ಆರಂಭಿಸುವ ನಿರ್ಧಾರ ಕೈಗೊಂಡಿರುವುದು, ಜಾಗತಿಕ ಇಂಧನ ಸರಬರಾಜು

ವಿಫಲವಾದ ಶಾಂತಿ ಮಾತುಕತೆ| ಹಾರ್ಮೋಜ್ ಜಲಸಂಧಿಗೆ ನೌಕಾ ದಿಗ್ಭಂಧನ Read More »