April 2026

ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ನಾಗರಹಾವು ಕಡಿದು ಸಾವು

ಸಮಗ್ರ ನ್ಯೂಸ್: ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಹಾವಿನ ಕಡಿತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಸಾಗರ ಪಟ್ಟಣದ ಎಸ್‌ಎನ್ ನಗರದಲ್ಲಿ ನಡೆದಿದೆ. ಭವೀನ್ (2.5) ಮೃತಪಟ್ಟ ಬಾಲಕ. ಮೃತ ಮಗು ಭವೀನ್ ತನ್ನ ತಂದೆ-ತಾಯಿಯೊಂದಿಗೆ ರಜೆ ಕಳೆಯಲು ಅಜ್ಜಿ ಮನೆಗೆ ಬಂದಿದ್ದನು. ಮನೆಯ ಮುಂದೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಾಗರಹಾವೊಂದು ಮಗುವಿನ ಕೈಗೆ ಕಚ್ಚಿದೆ. ತಕ್ಷಣವೇ ಎಚ್ಚೆತ್ತ ಪೋಷಕರು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. […]

ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ನಾಗರಹಾವು ಕಡಿದು ಸಾವು Read More »

ನಲವತ್ತರ ಮಹಿಳೆ ಜೊತೆ ಲವ್ ಗೆ ಬಿದ್ದ 21ರ ಯುವಕ| ಮನೆ ಬಿಟ್ಟು ಪರಾರಿಯಾದ ಜೋಡಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಒಂದು ವಿಚಿತ್ರ ಪ್ರೇಮ ಪ್ರಕರಣ ಬೆಳಕಿಗೆ ಬಂದಿದ್ದು, 21 ವರ್ಷದ ಯುವಕನೊಬ್ಬ ತನಗಿಂತ 19 ವರ್ಷ ದೊಡ್ಡವಳಾದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗುವ ಮೂಲಕ ಎರಡೂ ಕುಟುಂಬಗಳಿಗೆ ಆಘಾತ ನೀಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಶುರುವಾದ ಇವರ ಪರಿಚಯವು ಮನೆಯವರು ಒಪ್ಪದಿದ್ದರೂ ದೇವಸ್ಥಾನದಲ್ಲಿ ರಹಸ್ಯ ವಿವಾಹವಾಗುವ ಮಟ್ಟಕ್ಕೆ ತಲುಪಿದೆ. ಹಿಂದಿನ ಕಾಲದಲ್ಲಿ ಗಂಡನಿಗಿಂತ ಹೆಂಡತಿ ವಯಸ್ಸಿನಲ್ಲಿ ಚಿಕ್ಕವಳಿರಬೇಕು ಎಂಬ ಸಂಪ್ರದಾಯವಿತ್ತು. ಆದರೆ ಅಮ್ರೋಹಾದ ಈ ಯುವಕ ಮಾತ್ರ ಆಗ್ರಾದ 40 ವರ್ಷದ ವಿಧವೆ

ನಲವತ್ತರ ಮಹಿಳೆ ಜೊತೆ ಲವ್ ಗೆ ಬಿದ್ದ 21ರ ಯುವಕ| ಮನೆ ಬಿಟ್ಟು ಪರಾರಿಯಾದ ಜೋಡಿ Read More »

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಣೆ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಮತ್ತು ಲೆಬನಾನ್ ನಡುವೆ 10 ದಿನಗಳ ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದ್ದಾರೆ. ದೀರ್ಘಕಾಲದ ಸಂಘರ್ಷಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಕುರಿತು ಮಾತನಾಡಿದ ಟ್ರಂಪ್, “ಈ ಪ್ರಕ್ರಿಯೆಯ ಭಾಗವಾಗಿರುವುದು ನನ್ನ ಪಾಲಿನ ಗೌರವವಾಗಿದೆ. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತರುವುದು ನಮ್ಮ ಪ್ರಮುಖ ಗುರಿ,” ಎಂದು ತಿಳಿಸಿದ್ದಾರೆ. ಟ್ರಂಪ್ ಅವರ ಈ

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಣೆ Read More »

ಹವಾಮಾನ ವರದಿ| ಬಿಸಿಲ ಬೇಗೆ ತಣಿಸಲು ಬರಲಿದ್ದಾನೆ ಮಳೆರಾಯ| ಶಾಖದ ಅಲೆಯ ನಡುವೆ ಕೆಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡಕವಿದ ವಾತಾವರಣ ಕಂಡುಬಂದರೂ, ಸೆಖೆಯ ಪ್ರಮಾಣ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಸಂಜೆ

ಹವಾಮಾನ ವರದಿ| ಬಿಸಿಲ ಬೇಗೆ ತಣಿಸಲು ಬರಲಿದ್ದಾನೆ ಮಳೆರಾಯ| ಶಾಖದ ಅಲೆಯ ನಡುವೆ ಕೆಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದ ಐಎಂಡಿ Read More »

ಬೆಳ್ತಂಗಡಿ: ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ; ಚಾಲಕ ಸಾವು

ಸಮಗ್ರ ನ್ಯೂಸ್: ನಾಯಿಯೊಂದು ಏಕಾಏಕಿ ರಸ್ತೆಗೆ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಸಾವನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಮೃತರನ್ನು ನಾವರ ಗ್ರಾಮದ ಹಾರಡ್ಡೆ ನಿವಾಸಿ ದೇವಪ್ಪ @ ಸುಧಾಕರ (37) ಎಂದು ಗುರುತಿಸಲಾಗಿದೆ. ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ, ರಸ್ತೆ ಮೇಲೆ ಏಕಾಏಕಿ ನಾಯಿ ಅಡ್ಡಬಂದ ಹಿನ್ನೆಲೆಯಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಈ

ಬೆಳ್ತಂಗಡಿ: ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ; ಚಾಲಕ ಸಾವು Read More »

ಉಜಿರೆ: ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ತನ್ನ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಟಿ.ಬಿ. ಕ್ರಾಸ್ ನಿವಾಸಿ ಮಹಮ್ಮದ್ ಅಯಾನ್ (17) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ ಕಾಲೇಜಿನಲ್ಲಿ ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದನು. ಇತ್ತೀಚೆಗಷ್ಟೇ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದ ಅಯಾನ್, ದ್ವಿತೀಯ ಪಿಯುಸಿ ತರಗತಿಗೆ ಪ್ರವೇಶ ಪಡೆದಿದ್ದನು ಎಂದು ತಿಳಿದುಬಂದಿದೆ. ಬುಧವಾರ ತನ್ನ ಅಪಾರ್ಟ್ಮೆಂಟ್‌ನ ಕೊಠಡಿಯಲ್ಲಿದ್ದ ಅಯಾನ್, ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ಮನೆಯವರು ಗಮನಿಸಿದಾಗ ವಿಷಯ

ಉಜಿರೆ: ಅಪಾರ್ಟ್ಮೆಂಟ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ Read More »

ಪುತ್ತೂರು: ಮಹಾಲಿಂಗೇಶ್ವರ ಜಾತ್ರಾ ಹಿನ್ನಲೆ| ಎ.17ರಂದು ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಯುಕ್ತ ಇದೇ 16ರಂದು ಬಲ್ನಾಡು ಶ್ರೀದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪ್ಪೋತ್ಸವ ಹಾಗೂ ಇದೇ 17 ರಂದು ಬ್ರಹ್ಮರಥೋತ್ಸವ ಮತ್ತು ಇದೇ 18ರಂದು ಅವಭೃತ ಸ್ನಾನಕ್ಕಾಗಿ ದೇವರು ವೀರಮಂಗಲಕ್ಕೆ ತೆರಳುವ ಸಂಪ್ರದಾಯಗಳು ನಡೆಯಲಿವೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಅವಧಿಯಲ್ಲಿ ಮದ್ಯ ಮಾರಾಟವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಮತ್ತು ವೈನ್ ಶಾಪ್‍ಗಳನ್ನು 17ರಂದು ಬೆಳಿಗ್ಗೆ 6ರಿಂದ

ಪುತ್ತೂರು: ಮಹಾಲಿಂಗೇಶ್ವರ ಜಾತ್ರಾ ಹಿನ್ನಲೆ| ಎ.17ರಂದು ಮದ್ಯ ಮಾರಾಟ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ Read More »

ಗಲಾಟೆ, ಗೊಂದಲದ ನಡುವೆಯೇ ಸಂಸತ್ತಿನಲ್ಲಿ ಪ್ರಮುಖ 3 ಮಸೂದೆಗಳ ಮಂಡನೆ

ಸಮಗ್ರ ನ್ಯೂಸ್: ದೇಶದ ರಾಜಕೀಯ ದಿಕ್ಕನ್ನು ಬದಲಾಯಿಸಬಹುದಾದ ಮಹತ್ವದ ಬೆಳವಣಿಗೆಯಾಗಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಮಸೂದೆ ಮಂಡನೆಯಾಗಿದೆ. ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ಉದ್ದೇಶದಜೊತೆಗೆ, ಲೋಕಸಭೆಯ ಪ್ರಸ್ತುತ 543 ಸ್ಥಾನಗಳನ್ನು 850ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರ ಮುಂದಿಟ್ಟಿದೆ. ಇದೇ ಮಾದರಿಯಲ್ಲಿ ರಾಜ್ಯ ವಿಧಾನಸಭೆಗಳ ಸದಸ್ಯರ ಸಂಖ್ಯೆಯನ್ನೂ ವಿಸ್ತರಿಸುವ ಯೋಜನೆಗೆ ಸರ್ಕಾರ ಕೈಹಾಕಿದೆ. ಇವುಗಳ ಜೊತೆಗೆ 2026ರ ಗಡಿ ನಿರ್ಣಯ (ಡಿಲಿಮಿಟೇಶನ್) ಮಸೂದೆ, 2002ರ ಹಳೆಯ ಡಿಲಿಮಿಟೇಶನ್ ಕಾಯ್ದೆಯನ್ನು ರದ್ದುಗೊಳಿಸಿ ಅದರ ಬದಲಿಗೆ

ಗಲಾಟೆ, ಗೊಂದಲದ ನಡುವೆಯೇ ಸಂಸತ್ತಿನಲ್ಲಿ ಪ್ರಮುಖ 3 ಮಸೂದೆಗಳ ಮಂಡನೆ Read More »

ಪ್ರಧಾನಿ ಮೋದಿಗೆ 18 ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದು| ಕಿವಿಯಲ್ಲಿ ಗುಟ್ಟಾಗಿ ಮಾತ್ನಾಡಿಕೊಂಡಿದ್ದೇನು?

ಸಮಗ್ರ ನ್ಯೂಸ್: ರಾಜ್ಯಕ್ಕೆ ಬುಧವಾರ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ವಿವಿಧ ರೈಲ್ವೆ, ನೀರಾವರಿ, ರಸ್ತೆ ಯೋಜನೆಗಳ ಮಂಜೂರಾತಿ ಹಾಗೂ ಅನುದಾನ ಬಿಡುಗಡೆ, ಜಲಜೀವನ್‌ ಮಿಷನ್‌ನ ಬಾಕಿ ಮೊತ್ತ ಬಿಡುಗಡೆ, ಬೆಂಗಳೂರು ಅಭಿವೃದ್ಧಿಗೆ ವಿಶೇಷ ಅನುದಾನ, ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ವಿಶೇಷ ಅನುದಾನ ನೀಡಿಕೆ ಸೇರಿದಂತೆ ಒಟ್ಟು 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು. ಆದಿಚುಂಚನಗಿರಿ ಮಠದ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸಿದ

ಪ್ರಧಾನಿ ಮೋದಿಗೆ 18 ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದು| ಕಿವಿಯಲ್ಲಿ ಗುಟ್ಟಾಗಿ ಮಾತ್ನಾಡಿಕೊಂಡಿದ್ದೇನು? Read More »

ಮಂತ್ರಾಲಯದ ಬಳಿ ಭೀಕರ ಅಪಘಾತ| ರಾಯರ ದರ್ಶನ ಮುಗಿಸಿ ಮರಳುತ್ತಿದ್ದ 8 ಮಂದಿ ಸಾವು

ಸಮಗ್ರ ನ್ಯೂಸ್: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ

ಮಂತ್ರಾಲಯದ ಬಳಿ ಭೀಕರ ಅಪಘಾತ| ರಾಯರ ದರ್ಶನ ಮುಗಿಸಿ ಮರಳುತ್ತಿದ್ದ 8 ಮಂದಿ ಸಾವು Read More »