April 2026

ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪಾದಚಾರಿಗಳ ಮೇಲೆ ಉರುಳಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಮಹಿಳೆಯೊಬ್ಬರು […]

ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ Read More »

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್

ಸುಳ್ಯ: ಇಲ್ಲಿನ ನೆಹರೂ ಸ್ಮಾರಕ ಮಹಾವಿದ್ಯಾಲಯದ ಎರಡನೇ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮಂಡೆಕೋಲಿನ ಅಭಿಷೇಕ್ ಕಣೆಮರಡ್ಕ ನಿರಂತರ 24 ಗಂಟೆಗಳ ಕಾಲ ಕೂಚುಪುಡಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ದಾಖಲೆ ಬರೆದಿದ್ದಾರೆ. ನೆಹರೂ‌‌ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ಏ.11ರಂದು ಸಂಜೆ 6.30ರಿಂದ ಆರಂಭಗೊಂಡು ಏ.12ರ ಸಂಜೆ 6.30ರ ತನಕ ನಿರಂತರ 24 ಗಂಟೆ ಕುಚ್ಚುಪುಡಿ ನೃತ್ಯ ಮಾಡಿದರು. ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದು ದಾಖಲೆ ನಿರ್ಮಿಸಬೇಕೆಂಬ ಹಂಬಲದಿಂದ ಅಭಿಷೇಕ್ ಕುಚುಪುಡಿ

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್ Read More »

ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ರವಿವಾರದಂದು ಕಲಬುರಗಿಯಲ್ಲಿ ಅತ್ಯಾಧಿಕ ಉಷ್ಣಾಂಶ ದಾಖಲಾಗಿದ್ದು, ಗರಿಷ್ಟ ತಾಪಮಾನವು 41.6 ಸೆಲ್ಸಿಯಸ್‍ಗೆ ಏರಿಕೆಯಾಗಿದೆ. ಎ.13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ, ಎ.14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ

ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ Read More »

ಆಂದ್ರಪ್ರದೇಶದಲ್ಲಿ ಅಪಘಾತ| ಸುಳ್ಯ ಮೂಲದ ಯುವತಿ ಸಾವು

ಸುಳ್ಯ: ಸ್ನೇಹಿತೆಯ ಮದುವೆಗೆಂದು ಬೆಂಗಳೂರಿನಿಂದ ಹೊರಟಿದ್ದ ಐಟಿ ಉದ್ಯೋಗಿಗಳ ಕಾರು ಚಾಲಕನ ಅರೆನಿದ್ರೆಯ ಕಾರಣದಿಂದ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಸುಳ್ಯದ ಮೂಲದ ಯುವತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಭೀಕರ ಘಟನೆಯು ಶನಿವಾರ ಬೆಳಿಗ್ಗೆ ಆದೋನಿ-ಸಿರುಗುಪ್ಪ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಕಂದಡ್ಕದ ಕ್ಷಿಪ್ರಾ (25) ಮೃತಪಟ್ಟ ದುರ್ದೈವಿ. ಇವರೊಂದಿಗೆ ಪ್ರಯಾಣಿಸುತ್ತಿದ್ದ ಪ್ರದೀಪ್ ಅವರ ಸ್ಥಿತಿ ಗಂಭೀರವಾಗಿದ್ದು, ಕೋಮಾ ಸ್ಥಿತಿಗೆ ತಲುಪಿದ್ದಾರೆ. ಉಳಿದಂತೆ ಅರ್ಪಿತಾ ಮತ್ತು ಶರ್ಮಿಳಾ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಆಂದ್ರಪ್ರದೇಶದಲ್ಲಿ ಅಪಘಾತ| ಸುಳ್ಯ ಮೂಲದ ಯುವತಿ ಸಾವು Read More »

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ (ಏಪ್ರಿಲ್ 11) ಹೃದಯಾಘಾತ ಸಂಭವಿಸಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅವರು ಇಂದು(ಎ.12) ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಇದರಿಂದ ಭಾರತೀಯ ಸಂಗೀತ ಕ್ಷೇತ್ರದ ಅಪ್ರತಿಮ ಕೊಂಡಿಯೊಂದು ಕಳಚಿದಂತಾಗಿದೆ. ಪ್ಟೆಂಬರ್ 8, 1933 ರಂದು ಜನಿಸಿದ ಅವರು ಬಹಳ ಚಿಕ್ಕ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು ಮತ್ತು ವಿಶ್ವದ ಅತ್ಯಂತ ಹೆಚ್ಚು ರೆಕಾರ್ಡ್ ಮಾಡಲಾದ ಕಲಾವಿದರಲ್ಲಿ ಆಶಾ ಒಬ್ಬರೆನಿಸಿದ್ದಾರೆ. ಹಿಂದಿ,

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ Read More »

ಇರಾನ್ -ಅಮೇರಿಕಾ ನಡುವಿನ ಸಂಧಾನ ಸಭೆ ವಿಫಲ| ಇತ್ತ ಹಾರ್ಮೋಜ್ ದಾಟಿದ ಅಮೇರಿಕಾ ಯುದ್ಧ ನೌಕೆಗಳು

ಸಮಗ್ರ ನ್ಯೂಸ್: ಇರಾನ್ ಮತ್ತು ಅಮೆರಿಕ ನಡುವಿನ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳು ಯಾವುದೇ ಅಂತಿಮ ತೀರ್ಮಾನವಿಲ್ಲದೆ ಅಂತ್ಯಗೊಂಡಿವೆ. ಈ ಕುರಿತು ಮಾಹಿತಿ ನೀಡಿರುವ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (JD Vance), ಎರಡೂ ದೇಶಗಳ ನಡುವೆ ಒಮ್ಮತ ಮೂಡದ ಕಾರಣ ಸಂಧಾನ ಮಾತುಕತೆ ವಿಫಲವಾಗಿದೆ ಎಂದು ಖಚಿತಪಡಿಸಿದ್ದಾರೆ. ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ದೇಶಗಳಿಗೆ ಸಮ್ಮತವಾಗುವಂತಹ “ತೃಪ್ತಿದಾಯಕ ಒಪ್ಪಂದಕ್ಕೆ” ಬರಲು ಸಾಧ್ಯವಾಗಲಿಲ್ಲ. ಅಮೆರಿಕ ಮುಂದಿಟ್ಟಿದ್ದ ಪ್ರಮುಖ ನಿಯಮ

ಇರಾನ್ -ಅಮೇರಿಕಾ ನಡುವಿನ ಸಂಧಾನ ಸಭೆ ವಿಫಲ| ಇತ್ತ ಹಾರ್ಮೋಜ್ ದಾಟಿದ ಅಮೇರಿಕಾ ಯುದ್ಧ ನೌಕೆಗಳು Read More »

ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 102 ನೆಕ್ಕಿಲಾಡಿ ಹಾಗೂ ಕೋರಿಯರ್ ಸಮೀಪದ ಕುಮಾರಧಾರಾ ನದಿ ತೀರದಲ್ಲಿ ಶನಿವಾರ 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ನದಿ ತೀರದಲ್ಲಿ ಆನೆಗಳು ಗುಂಪಾಗಿ ಸಂಚರಿಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆನೆಗಳು ಜನವಸತಿ ಪ್ರದೇಶಕ್ಕೆ ನುಗ್ಗದಂತೆ ತಡೆಯಲು ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಾಡಾನೆಗಳನ್ನು ಅರಣ್ಯದತ್ತ

ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ Read More »

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ -ಮಗಳು ಇಬ್ಬರೂ ಪಾಸ್

ಸಮಗ್ರ ನ್ಯೂಸ್: “ಸಾಧಿಸುವ ಛಲವಿದ್ದರೆ ಸಾಧನೆಗೆ ವಯಸ್ಸು ಅಡ್ಡಿಯಾಗದು” ಎಂಬ ಮಾತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‌ನಲ್ಲಿ ನಡೆದ ಈ ಅಪರೂಪದ ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ತಾಯಿ ಮತ್ತು ಮಗಳು ಏಕಕಾಲಕ್ಕೆ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ. ಬಿ.ಸಿ. ರೋಡ್ ಕೈಕಂಬ ನಿವಾಸಿಯಾಗಿರುವ ನೇತ್ರಾವತಿ ವಿ.ಆರ್. ಅವರು ವೃತ್ತಿಯಲ್ಲಿ ಗೃಹಿಣಿ. ಸಂಸಾರದ ಜವಾಬ್ದಾರಿಗಳ ನಡುವೆಯೂ ಶಿಕ್ಷಣ ಮುಂದುವರಿಸಬೇಕೆಂಬ ಹಳೆಯ ಕನಸನ್ನು ಅವರು ಕೈಬಿಟ್ಟಿರಲಿಲ್ಲ. ಈ ಬಾರಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ -ಮಗಳು ಇಬ್ಬರೂ ಪಾಸ್ Read More »

ಮಹೇಶ್ ತಿಮರೋಡಿಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್| ಮೂರನೇ ಬಾರಿ ಗಡೀಪಾರು ಆದೇಶಕ್ಕೆ ತಡೆ

ಸಮಗ್ರ ನ್ಯೂಸ್: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏಪ್ರಿಲ್ 16ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ಪೊಲೀಸ್‌ ಠಾಣಾ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು

ಮಹೇಶ್ ತಿಮರೋಡಿಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್| ಮೂರನೇ ಬಾರಿ ಗಡೀಪಾರು ಆದೇಶಕ್ಕೆ ತಡೆ Read More »

ಪ್ರಧಾನಿ ಹತ್ಯೆಗೆ ಸಂಚು; ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಿಹಾರದ ಬಕ್ಸರ್‌ನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತನೆಗೆ ನೆರವಾಗುತ್ತಿದ್ದ ಇನ್ನಿಬ್ಬರನ್ನೂ ಸಹ ವಶಕ್ಕೆ ಪಡೆಯಲಾಗಿದೆ. ಕೇಂದ್ರ ತನಿಖಾ ಸಂಸ್ಥೆಗಳ ಖಚಿತ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ​ಬಂಧಿತ ಆರೋಪಿಯನ್ನು ಬಕ್ಸರ್ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದ್ದು, ಇವನು ದೀರ್ಘಕಾಲದಿಂದ ಹ್ಯಾಕಿಂಗ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ. ಈತ ಪ್ರಧಾನಿಯವರ ಭದ್ರತಾ ವ್ಯವಸ್ಥೆ, ಅವರ ಸಂಚಾರ

ಪ್ರಧಾನಿ ಹತ್ಯೆಗೆ ಸಂಚು; ಮೂವರು ಅರೆಸ್ಟ್ Read More »