ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .


ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ ಅಧ್ಯಯನ ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರಾವಳಿ ಮತ್ತು ರಾಜಧಾನಿ ಜನರ ಬಹುದಿನಗಳ ಕನಸಾಗಿದ್ದ ಮಂಗಳೂರು– ಬೆಂಗಳೂರು ನಡುವಿನ ‘ವಂದೇ ಭಾರತ್ ಎಕ್ಸ್‌ಪ್ರೆಸ್’ (Vande Bharat Express) ರೈಲು ಸಂಚಾರವು ಇನ್ನು ಕೇವಲ ಒಂದು ತಿಂಗಳೊಳಗೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಹಾಸನ ಮತ್ತು ಮಂಗಳೂರು ನಡುವಿನ ಘಾಟ್ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡ ಬೆನ್ನಲ್ಲೇ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರ ಬೇಡಿಕೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ಪ್ರಮುಖ ನಿಲ್ದಾಣಗಳಲ್ಲಿ ಇದಕ್ಕೆ ನಿಲುಗಡೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Leave a Comment

Your email address will not be published. Required fields are marked *