ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕಕ್ಕೆ ಬಹು ದೊಡ್ಡ ಜಯ ಸಿಕ್ಕಿದೆ.

. Ad Widget . Ad Widget . Ad Widget .

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ 2025ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು. ತಮಿಳುನಾಡಿನ ಆಕ್ಷೇಪಣೆ, ತಜ್ಞ ಸಂಸ್ಥೆಗಳು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಭಿಪ್ರಾಯ ಪರಿಗಣಿಸಿದ ನಂತರವೇ ಆಯೋಗ ಯೋಜನೆಗೆ ಅನುಮೋದನೆ ನೀಡಲಿದೆ ಎಂದು ತಿಳಿಸಿತ್ತು. ಈ ಮಧ್ಯೆ, 2025ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ತಮಿಳುನಾಡು ಮತ್ತೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಮಂಗಳವಾರ ಈ ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾ.ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾ.ವಿಫುಲ್ ಎಂ. ಪಾಂಚೋಲಿ ಅವರಿದ್ದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *