May 2026

ಬೆಳ್ಳಾರೆ ಮೂಲದ ಸಾಪ್ಟ್ ವೇರ್ ಉದ್ಯೋಗಿ ಬೆಂಗಳೂರಿನಲ್ಲಿ ಅಪಘಾತದಲ್ಲಿ ಸಾವು

ಬೆಳ್ಳಾರೆ: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಬೆಳ್ಳಾರೆಯ ಯುವಕ ಸೂರಜ್ ರೈ (27) ಅವರು ರಸ್ತೆ ಅಪಘಾತದಲ್ಲಿ ಸಂಭವಿಸಿದ ತೀವ್ರ ಗಾಯಗಳಿಂದಾಗಿ ಇಂದು (ಮೇ 22) ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾದರು. ಬೆಳ್ಳಾರೆಯ ನಿವಾಸಿ, ಖ್ಯಾತ ಯಕ್ಷಗುರು ವಾಸುದೇವ ರೈ ಮತ್ತು ಶರ್ಮಿಳಾ ವಿ. ರೈ ದಂಪತಿಯ ಪುತ್ರರಾಗಿರುವ ಸೂರಜ್ ರೈ ಅವರು ಮೇ 15ರಂದು ರಾತ್ರಿ ತಮ್ಮ ಬೈಕ್‌ನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕುಣಿಗಲ್ ಬಳಿ ಇವರ ಬೈಕ್ ಮತ್ತು ಕೋಳಿ ಸಾಗಾಟದ ವಾಹನದ ನಡುವೆ […]

ಬೆಳ್ಳಾರೆ ಮೂಲದ ಸಾಪ್ಟ್ ವೇರ್ ಉದ್ಯೋಗಿ ಬೆಂಗಳೂರಿನಲ್ಲಿ ಅಪಘಾತದಲ್ಲಿ ಸಾವು Read More »

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಹಾತಿರುವು| ಮರು ತನಿಖೆ ನಿರ್ಧಾರ ಸಿಬಿಐ ವಿವೇಚನೆಗೆ ಬಿಟ್ಟ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಧರ್ಮಸ್ಥಳದ ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಹಳೆಯ ಪ್ರಕರಣದ ಮರು ತನಿಖೆ ಕುರಿತು ಕೇಂದ್ರ ತನಿಖಾ ಸಂಸ್ಥೆ ಅಥವಾ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಲು ಕರ್ನಾಟಕ ರಾಜ್ಯ ಸರ್ಕಾರ ಮುಂದಾಗಿದೆ. ಮುಂದಿನ ವಾರ ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಅಷ್ಟರೊಳಗೆ ಸರ್ಕಾರ ತನ್ನ ಈ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಹಾತಿರುವು| ಮರು ತನಿಖೆ ನಿರ್ಧಾರ ಸಿಬಿಐ ವಿವೇಚನೆಗೆ ಬಿಟ್ಟ ರಾಜ್ಯ ಸರ್ಕಾರ Read More »

ಪುತ್ತೂರು: ಇಲಿ ಹಿಡಿಯಲು ಹೋಗಿ ಕಾರೊಳಗೆ ಸಿಕ್ಕಿಹಾಕಿಕೊಂಡ ಹಾವು

ಸಮಗ್ರ ನ್ಯೂಸ್: ಇಲಿಯನ್ನು ಬೇಟೆಯಾಡಲು ಹೋಗಿ ಹಾವೊಂದು ಕಾರಿನ ಇಂಜಿನ್ ಅಡಿಭಾಗದ ರಂಧ್ರದಲ್ಲಿ ಸಿಲುಕಿಕೊಂಡ ಅಪರೂಪದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. ಕೊನೆಗೆ ಉರಗತಜ್ಞರ ಸಕಾಲಿಕ ಭೇಟಿ ಹಾಗೂ ಹರಸಾಹಸದಿಂದ ಹಾವನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಪುತ್ತೂರು ನಗರದ ನಿವಾಸಿಯೊಬ್ಬರು ತಮ್ಮ ಕಾರನ್ನು ಎಂದಿನಂತೆ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಕಾರಿನ ಬಳಿ ಬಂದ ಇಲಿಯನ್ನು ಬೆನ್ನಟ್ಟಿದ ಹಾವೊಂದು, ಕಾರಿನ ಅಡಿಭಾಗದಲ್ಲಿದ್ದ ಸಣ್ಣ ರಂಧ್ರದ ಮೂಲಕ ಒಳನುಗ್ಗಿದೆ. ಒಳಗೆ ನುಗ್ಗಿ ಇಲಿಯನ್ನು ಹಿಡಿದ ಹಾವಿಗೆ, ತಿಂದ ಬಳಿಕ

ಪುತ್ತೂರು: ಇಲಿ ಹಿಡಿಯಲು ಹೋಗಿ ಕಾರೊಳಗೆ ಸಿಕ್ಕಿಹಾಕಿಕೊಂಡ ಹಾವು Read More »

ನಮ್ಮನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ| ಖಾತೆ ಬ್ಯಾನ್ ಬೆನ್ನಲ್ಲೇ ಹೊಸ ಸಂದೇಶ ನೀಡಿದ ಕಾಕ್ರೋಚ್

ಸಮಗ್ರ ನ್ಯೂಸ್: ಕಾಕ್ರೋಚ್ ಜನತಾ ಪಾರ್ಟಿ ಸದ್ದು ಜೋರಾಗಿ ಕೇಳಿಬರುತ್ತಿದೆ. ಚೀಫ್ ಜಸ್ಟೀಸ್ ಆಫ್ ಇಂಡಿಯಾ ಸೂರ್ಯ ಕಾಂತ್ ಜಿರೆಳೆ ಹೇಳಿಕೆಗೆ ಪ್ರತಿಭಟನಾ ರೂಪವಾಗಿ ಹುಟ್ಟಿಕೊಂಡ ಸೋಶಿಯಲ್ ಮೀಡಿಯಾ ಪಾರ್ಟಿ ಕಾಕ್ರೋಚ್ ಜನತಾ ಪಾರ್ಟಿ. ನಾಲ್ಕೇ ದಿನದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಕೋಲಾಹಲ ಸೃಷ್ಟಿಸಿದೆ. 10 ಮಿಲಿಯನ್ ಫಾಲೋವರ್ಸ್ ಮೂಲಕ ಬಿಜೆಪಿ ಇನ್‌ಸ್ಟಾಗ್ರಾಂ ಖಾತೆ ಹಿಂದಿಕ್ಕಿದ ಬೆನ್ನಲ್ಲೇ ಇತ್ತ ಕಾಕ್ರೋಚ್ ಪಾರ್ಟಿಯ ಎಕ್ಸ್ ಖಾತೆ ಬ್ಲಾಕ್ ಆಗಿದೆ. ಇದೀಗ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹೊಸ

ನಮ್ಮನ್ನು ನಿರ್ಮೂಲನೆ ಮಾಡಲು ಸಾಧ್ಯವಿಲ್ಲ| ಖಾತೆ ಬ್ಯಾನ್ ಬೆನ್ನಲ್ಲೇ ಹೊಸ ಸಂದೇಶ ನೀಡಿದ ಕಾಕ್ರೋಚ್ Read More »

ಬಿಡುಗಡೆಯಾಗದ ಎರಡು ತಿಂಗಳ‌ ಗೃಹಲಕ್ಷ್ಮಿ ಹಣ| ಇಬ್ಬರು ಮಹಿಳೆಯರಿಂದ ಹೈಕೋರ್ಟ್ ನಲ್ಲಿ ಅಪೀಲು

ಸಮಗ್ರ ನ್ಯೂಸ್: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಿಂಬಾಕಿ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಗೃಹ ಲಕ್ಷ್ಮೀ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಆರ್.‌ಗಂಗಾ ಮತ್ತು‌ ನಂದಿನಿ‌ ಲೇಔಟ್ ನಿವಾಸಿ ಜಿ.ಡಿ.‌ಪವಿತ್ರಾ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ನ್ಯಾ.ಸೂರಜ್ ಗೋವಿಂದ ರಾಜ್ ಅವರ

ಬಿಡುಗಡೆಯಾಗದ ಎರಡು ತಿಂಗಳ‌ ಗೃಹಲಕ್ಷ್ಮಿ ಹಣ| ಇಬ್ಬರು ಮಹಿಳೆಯರಿಂದ ಹೈಕೋರ್ಟ್ ನಲ್ಲಿ ಅಪೀಲು Read More »

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಗಾಳಿ ಸಹಿತ ಪೂರ್ವ ಮುಂಗಾರು| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದೂ ಸಹ ಮಳೆಯ ಅಬ್ಬರ ಮುಂದುವರಿಯಲಿದ್ದು, ಹಲವೆಡೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಗಂಟೆಗೆ 50-60 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮೈಸೂರು, ಮಂಡ್ಯ,

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಗಾಳಿ ಸಹಿತ ಪೂರ್ವ ಮುಂಗಾರು| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ಕೇರಳಂ ವಿಧಾನಸಭೆಯಲ್ಲಿ ಮೊಳಗಿದ ಕನ್ನಡ ‌ಡಿಂಡಿಮ| ಮಂಜೇಶ್ವರ ಶಾಸಕ‌ ಎ.ಕೆ ಎಂ. ಅಶ್ರಫ್ ರಿಂದ ಕನ್ನಡದಲ್ಲಿ ಪ್ರಮಾಣವಚನ

ಸಮಗ್ರ ನ್ಯೂಸ್: ಕೇರಳಂ ರಾಜ್ಯದ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ ಮೊಳಗಿದೆ. ಮಲಯಾಳಂ ಅಧಿಕೃತ ಭಾಷೆಯಾದ ಕೇರಳದ ವಿಧಾನಸಭೆಯಲ್ಲಿ ಗುರುವಾರ ಯುಡಿಎಫ್ ಶಾಸಕ ಎಂಕೆಎಂ ಆಶ್ರಫ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಗುರುವಾರ ಕೇರಳಂ ವಿಧಾನಸಭೆಯ ಅಧಿವೇಶನದಲ್ಲಿ ಅಶ್ರಫ್ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ‘ಎ.ಕೆ.ಎಂ ಅಶ್ರಫ್ ಎಂಬವನಾದ ನಾನು ವಿಧಾನಸಭೆಯ ಸದಸ್ಯನಾಗಿ ಚುನಾಯಿತನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶೃದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು ಭಾರತದ ಸಾರ್ವಭೌಮತ್ವ

ಕೇರಳಂ ವಿಧಾನಸಭೆಯಲ್ಲಿ ಮೊಳಗಿದ ಕನ್ನಡ ‌ಡಿಂಡಿಮ| ಮಂಜೇಶ್ವರ ಶಾಸಕ‌ ಎ.ಕೆ ಎಂ. ಅಶ್ರಫ್ ರಿಂದ ಕನ್ನಡದಲ್ಲಿ ಪ್ರಮಾಣವಚನ Read More »

ಧರ್ಮಸ್ಥಳ: ಮತ್ತೆ ತಲೆಬುರುಡೆ ಪ್ರಕರಣ ಮುನ್ನಲೆಗೆ| ಎಸ್ಐಟಿ, ಸೋಕೊ ತಂಡದಿಂದ ಬಂಗ್ಲೆಗುಡ್ಡದಲ್ಲಿ ತನಿಖೆ

ಸಮಗ್ರ ನ್ಯೂಸ್: ದೇಶದಲ್ಲಿಯೇ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಡಲಾಗಿದೆ ಎಂಬ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣದ ಕೇಂದ್ರಬಿಂದುವಾಗಿರುವ ಬಂಗ್ಲೆಗುಡ್ಡೆ ಪರಿಸರಕ್ಕೆ ಗುರುವಾರ ಮಧ್ಯಾಹ್ನ ಬೆಂಗಳೂರಿನಿಂದ ಅಗಮಿಸಿದ ಎಫ್‌ಎಸ್‌ಎಲ್ ತಜ್ಞರು ಮತ್ತು ಸೋಕೋ ತಂಡದವರ ಜೊತೆ ಎಸ್‌ಐಟಿ ಅಧಿಕಾರಿಗಳು ಭೇಟಿ ನೀಡಿದ್ದು, ನೇತ್ರಾವತಿ ನದಿತಟದಲ್ಲಿ ಮತ್ತೆ ಮಹಜರು ಕಾರ್ಯ ಆರಂಭಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಸುಮಾರು ಏಳು ಶವಗಳ ಅವಶೇಷ ಪತ್ತೆಯಾಗಿದೆ ಎಂಬ ಸ್ಥಳದಲ್ಲಿ ಈ ತಂಡ

ಧರ್ಮಸ್ಥಳ: ಮತ್ತೆ ತಲೆಬುರುಡೆ ಪ್ರಕರಣ ಮುನ್ನಲೆಗೆ| ಎಸ್ಐಟಿ, ಸೋಕೊ ತಂಡದಿಂದ ಬಂಗ್ಲೆಗುಡ್ಡದಲ್ಲಿ ತನಿಖೆ Read More »

ಬೆಂಗಳೂರು: ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಅವಘಡ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಭೀಕರ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ವಿಮಾನವು ರನ್‌ವೇ ಮೇಲೆ ಇಳಿಯುವಾಗ ಅದರ ಹಿಂಭಾಗವು ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ದೆಹಲಿಯಿಂದ ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಏರ್ ಇಂಡಿಯಾದ AI2651 ವಿಮಾನವು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಿದ್ಧವಾಗಿತ್ತು. ಆ ಸಮಯದಲ್ಲಿ ಅದರ ಮುಂದೆ ಚಲಿಸುತ್ತಿದ್ದ ಮತ್ತೊಂದು

ಬೆಂಗಳೂರು: ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ಅವಘಡ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ Read More »

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್

ಸಮಗ್ರ ನ್ಯೂಸ್: ಭಾರತದ ಮುಖ್ಯ ನ್ಯಾಯಮೂರ್ತಿಗಳು ಯುವಕರ ಬಗ್ಗೆ ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಆಕ್ರೋಶ, ವ್ಯಂಗ್ಯ ಮತ್ತು ಆನ್‌ಲೈನ್ ಅಭಿಯಾನವಾಗಿ ಪ್ರಾರಂಭವಾದ ಮೀಮ್-ಉತ್ತೇಜಿತ ವಿಡಂಬನಾತ್ಮಕ ರಾಜಕೀಯ ಚಳವಳಿಯಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಕೇವಲ ಐದು ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ 10 ಮಿಲಿಯನ್ ಅನುಯಾಯಿಗಳನ್ನು ದಾಟಿದ್ದು, ಆನ್‌ಲೈನ್ ಯುದ್ಧಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ಪಕ್ಷ ಬಿಜೆಪಿಯನ್ನು ಹಿಂದಿಕ್ಕಿದೆ. ದಶಕಗಳಿಂದ ರಾಜಕೀಯ ಪ್ರಾಬಲ್ಯವನ್ನು ಎಚ್ಚರಿಕೆಯಿಂದ ಬೆಳೆಸಿಕೊಂಡು ಬಂದಿರುವ ದೇಶದಲ್ಲಿ, ಆನ್‌ಲೈನ್ ವೈರಲ್ ಪಕ್ಷವು ವ್ಯಂಗ್ಯ, ರೀಲ್‌ಗಳು ಮತ್ತು ವೈರಲ್ ಆಕ್ರೋಶದಿಂದ

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್ Read More »