May 2026

ದುಬಾರೆ: ಸಾಕಾನೆಗಳ ಕಾದಾಟದ ನಡುವೆ ಪ್ರಾಣ ಕಳೆದುಕೊಂಡ ಪ್ರವಾಸಿ ಮಹಿಳೆ

ಸಮಗ್ರ ನ್ಯೂಸ್: ಪ್ರಕೃತಿ ಸೌಂದರ್ಯ ಸವಿಯಲು ಬಂದಿದ್ದ ಪ್ರವಾಸಿ ಮಹಿಳೆಯೊಬ್ಬರು ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಬಲಿಯಾದ ದಾರುಣ ಘಟನೆ ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ ಮೂಲದ ಜಿನ್ನು (33) ಎಂಬ ಮಹಿಳೆ ಆನೆಗಳ ನಡುವಿನ ಜಗಳದ ವೇಳೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ದುಬಾರೆ ಶಿಬಿರದಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಶಿಬಿರದ ಸಾಕಾನೆಗಳಾದ ‘ಮಾರ್ತಾಂಡ’ ಮತ್ತು ‘ಕಂಜನ್’ […]

ದುಬಾರೆ: ಸಾಕಾನೆಗಳ ಕಾದಾಟದ ನಡುವೆ ಪ್ರಾಣ ಕಳೆದುಕೊಂಡ ಪ್ರವಾಸಿ ಮಹಿಳೆ Read More »

ಮಂಗಳೂರು: ಲಿಪ್ಟ್ ನಲ್ಲಿ ಸಿಲುಕಿ ಯುವಕ‌ ದುರ್ಮರಣ

ಸಮಗ್ರ ನ್ಯೂಸ್: ಮಂಗಳೂರು ನಗರದ ಕುಂಟಿಕಾನ ಸಮೀಪದ ಮಾರ್ಟ್ ಒಂದರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಟ್ಟಡದ ಲಿಫ್ಟ್ನಲ್ಲಿ ಸಿಲುಕಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪೂಂಜಕೆರೆ ನಿವಾಸಿ ನೌಫಲ್ (28) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.ನೌಫಲ್ ಅವರು ಎಂದಿನಂತೆ ಕೆಲಸದ ನಿಮಿತ್ತ ಮಾರ್ಟ್ಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಯ ನಡುವೆ ಲಿಫ್ಟ್ ತಾಂತ್ರಿಕ ದೋಷದಿಂದಾಗಿ ಸಿಲುಕಿಕೊಂಡಿದೆ. ಈ ವೇಳೆ ಲಿಫ್ಟ್ನೊಳಗೆ ನೌಫಲ್ ಸಿಲುಕಿಕೊಂಡಿರುವುದನ್ನು ಗಮನಿಸಿದ ಅವರ

ಮಂಗಳೂರು: ಲಿಪ್ಟ್ ನಲ್ಲಿ ಸಿಲುಕಿ ಯುವಕ‌ ದುರ್ಮರಣ Read More »

ಶುಭ ಮುಹೂರ್ತಗಳ ಕೊರತೆ ಕಾರಣ| 36 ದಿನಗಳ‌ ಕಾಲ ಶುಭ ಸಮಾರಂಭಗಳ ಬ್ರೇಕ್

ಸಮಗ್ರ ನ್ಯೂಸ್: ಶುಭ ಮುಹೂರ್ತಗಳಿಗೆ ಸದ್ಯ ವಿರಾಮ ಬಿದ್ದಿದೆ. ಮುಂಬರುವ ಜೂನ್ 18ರ ತನಕ ಯಾವುದೇ ಶುಭ ಮುಹೂರ್ತಗಳಿಲ್ಲ ಎಂದು ಪಂಡಿತರು ತಿಳಿಸಿದ್ದಾರೆ. ‘ಪರಾಭವ’ ನಾಮ ಸಂವತ್ಸರದಲ್ಲಿ ಶುಭ ಮುಹೂರ್ತಗಳ ಕೊರತೆಯಿಂದಾಗಿ ಮದುವೆ ಸಮಾರಂಭಗಳು ಹಾಗೂ ಗೃಹಪ್ರವೇಶಗಳಿಗೆ ಬ್ರೇಕ್ ಬಿದ್ದಿದೆ. ಅಧಿಕ ಜ್ಯೇಷ್ಠ ಮಾಸದ ಪ್ರಭಾವದಿಂದಾಗಿ ಸತತ 36 ದಿನಗಳ ಕಾಲ ಯಾವುದೇ ಒಳ್ಳೆಯ ಮುಹೂರ್ತಗಳಿಲ್ಲವಂತೆ. ಕಳೆದ ಎರಡು ತಿಂಗಳುಗಳಿಂದ ಮದುವೆ ಸಮಾರಂಭಗಳು, ಬ್ಯಾಂಡ್-ಬಾಜಾಗಳಿಂದ ಕಳೆಗಟ್ಟಿದ್ದ ಕಲ್ಯಾಣ ಮಂಟಪಗಳು ಈಗ ಜನರಿಲ್ಲದೆ ಕಳೆಗುಂದುತ್ತಿವೆ. ಮೇ 14ರಿಂದ ಅಧಿಕ

ಶುಭ ಮುಹೂರ್ತಗಳ ಕೊರತೆ ಕಾರಣ| 36 ದಿನಗಳ‌ ಕಾಲ ಶುಭ ಸಮಾರಂಭಗಳ ಬ್ರೇಕ್ Read More »

ಗೃಹಲಕ್ಷ್ಮಿ ಹಣದಿಂದ ರೊಟ್ಟಿ ಉದ್ಯಮ ಆರಂಭಿಸಿದ ಮೂವರು ಮಹಿಳೆಯರು

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಡಿ ತಮಗೆ ಸಿಗುತ್ತಿದ್ದ ಮಾಸಿಕ 2,000 ರೂಪಾಯಿ ಹಣವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಮೂವರು ಮಹಿಳೆಯರು ಸ್ವಾವಲಂಬಿ ಬದುಕಿಗೆ ಮಾದರಿಯಾಗಿದ್ದಾರೆ. ಈ ಮಹಿಳೆಯರು ಒಟ್ಟಾಗಿ ರೊಟ್ಟಿ ತಯಾರಿಕಾ ಕೇಂದ್ರವನ್ನು ಆರಂಭಿಸಿದ್ದು, ಅದಕ್ಕೆ ‘ಗೃಹಲಕ್ಷ್ಮಿ ರೊಟ್ಟಿ ಕೇಂದ್ರ’ ಎಂದು ಹೆಸರಿಟ್ಟಿದ್ದಾರೆ. ಕುಷ್ಟಗಿ ಪಟ್ಟಣದ ನಿವಾಸಿಗಳಾದ ಮಕ್ತುಂಬಿ ಕೊಪ್ಪದ, ಸಾಜನಬಿ ದಾದಿಬಾಯಿ ಮತ್ತು ಹುಸೇನಬಿ ಕಮ್ಮಾರ ಎಂಬ ಮೂವರು ಮಹಿಳೆಯರೇ ಈ ಸಾಹಸಕ್ಕೆ ಕೈಹಾಕಿದ ಗೆಳತಿಯರು.

ಗೃಹಲಕ್ಷ್ಮಿ ಹಣದಿಂದ ರೊಟ್ಟಿ ಉದ್ಯಮ ಆರಂಭಿಸಿದ ಮೂವರು ಮಹಿಳೆಯರು Read More »

ಅಮೇರಿಕಾ – ನೈಜೀರಿಯಾ ಜಂಟಿ ಕಾರ್ಯಾಚರಣೆ| ಐಸಿಸ್ ಉಗ್ರ ಕಮಾಂಡರ್ ಹತ

ಸಮಗ್ರ ನ್ಯೂಸ್: ಅಮೆರಿಕ ಮತ್ತು ನೈಜೀರಿಯಾದ ಜಂಟಿ ಸೇನಾ ಕಾರ್ಯಾಚರಣೆಯಲ್ಲಿ ಐಸಿಸ್‌ನ ಮೋಸ್ಟ್‌ ವಾಂಟೆಡ್‌ ಉಗ್ರ, ಜಾಗತಿಕ ಕಮಾಂಡರ್‌ಗಳಲ್ಲಿ ಅಗ್ರ 2ನೇ ಸ್ಥಾನದಲ್ಲಿದ್ದ ಅಬು-ಬಿಲಾಲ್ ಅಲ್-ಮಿನುಕಿಯನ್ನು ಹತ್ಯೆಗೈಯ್ಯಲಾಗಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರೇ ಮಾಹಿತಿ ನೀಡಿದ್ದಾರೆ. ನನ್ನ ನಿರ್ದೇಶನದ ಮೇರೆಗೆ ಅಮೆರಿಕದ ಧೈರ್ಯಶಾಲಿ ಸೇನಾ ಪಡೆಗಳು ಮತ್ತು ನೈಜೀರಿಯಾ ಸಶಸ್ತ್ರ ಪಡೆಗಳು ಅತ್ಯಂತ ಸಂಕೀರ್ಣ ಹಾಗೂ ಸೂಕ್ಷ್ಮವಾಗಿ ರೂಪಿಸಲಾದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿವೆ ಎಂದು ಹೇಳಿದ್ದಾರೆ. ಅಬು-ಬಿಲಾಲ್ ಅಲ್-ಮಿನುಕಿ ಆಫ್ರಿಕಾದಲ್ಲಿ ಅಡಗಿ ಕುಳಿತಿದ್ದರೂ ನಾವು

ಅಮೇರಿಕಾ – ನೈಜೀರಿಯಾ ಜಂಟಿ ಕಾರ್ಯಾಚರಣೆ| ಐಸಿಸ್ ಉಗ್ರ ಕಮಾಂಡರ್ ಹತ Read More »

ಅಸಮಾಧಾನ ಬೆನ್ನಲ್ಲೇ ಸಂಸದ ಚೌಟರಿಂದ ಕೇಂದ್ರ ಸಚಿವ ಗಡ್ಕರಿಗೆ ಮನವಿ| ರಸ್ತೆ ಕಾಮಗಾರಿಗೆ ಅನುದಾನ ನೀಡಲು ಪತ್ರ

ಸಮಗ್ರ ನ್ಯೂಸ್: ಮೂಡುಬಿದಿರೆಯ ಸಾಣೂರು- ಬಿಕಾರ್ನಕಟ್ಟೆ ಯೋಜನೆಯಡಿ ಬರುವ ಎನ್‌ಎಚ್-169ರ ಬನ್ನಡ್ಕ ಪ್ರದೇಶದಲ್ಲಿ ಅಪೂರ್ಣವಾಗಿರುವ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಸಂಸದ ಬ್ರಿಜೇಶ್ ಚೌಟ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ. ಬನ್ನಡ್ಕ ಭಾಗದಲ್ಲಿ ನಿರಂತರವಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಸಾವು ನೋವುಗಳು ಸಂಭವಿಸುತ್ತಿದೆ. ಹಿನ್ನೆಲೆಯಲ್ಲಿ ಸಂಸದರು ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರೊಂದಿಗೆ ಸಭೆ ನಡೆಸಿದಾಗ, ಈ ಭಾಗದಲ್ಲಿ ಸುಮಾರು 650 ರಿಂದ 700

ಅಸಮಾಧಾನ ಬೆನ್ನಲ್ಲೇ ಸಂಸದ ಚೌಟರಿಂದ ಕೇಂದ್ರ ಸಚಿವ ಗಡ್ಕರಿಗೆ ಮನವಿ| ರಸ್ತೆ ಕಾಮಗಾರಿಗೆ ಅನುದಾನ ನೀಡಲು ಪತ್ರ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಮೇ 17ರಿಂದ ಮೇ 23ರವರೆಗೆ ರಾಶಿಚಕ್ರದಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ಕಂಡುಬರುತ್ತಿವೆ. ಹಲವು ಆದಾಯ ಮೂಲಕ್ಕೆ ಹಿನ್ನಡೆ ಸಾಧ್ಯತೆ. ಕೆಲವರಿಗೆ ನಿರ್ವಹಣೆ ಕಷ್ಟ. ಈ ವಾರ ಯಾವ ರಾಶಿಗೆ ಲಾಭ? ಯಾರಿಗೆ ಶುಭ ನೋಡೋಣ… ​ಮೇಷ ರಾಶಿ :​ರಾಶಿಯಲ್ಲಿ ಕುಜ ಹಾಗೂ ಪಂಚಮದಲ್ಲಿ ಚಂದ್ರ – ಕೇತು ಇದ್ದಾರೆ. ದ್ವಿತೀಯದ ರವಿ-ಬುಧರಿಂದ ಆರ್ಥಿಕ ಲಾಭವಿದ್ದರೂ, ಮಾತಿನಲ್ಲಿ ತಾಳ್ಮೆ ಇರಲಿ. ಮಕ್ಕಳ ವಿಷಯದಲ್ಲಿ ಸಣ್ಣ ಆತಂಕ ಎದುರಾಗಬಹುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ.​ವೃಷಭ ರಾಶಿ :​ನಿಮ್ಮ ರಾಶಿಯಲ್ಲಿ ರವಿ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ.ಕ ಸಂಸದ ಬ್ರಿಜೇಶ್ ಚೌಟ ವಿರುದ್ದ ಭುಗಿಲೆದ್ದ ಸ್ವಪಕ್ಷೀಯರ ಅಸಮಾಧಾನ| ರಸ್ತೆ ಸಮಸ್ಯೆಗೆ ಪರಿಹಾರ ಕೇಳ ಹೋದವರಿಗೆ ಸಂಸದರಿಂದ ಅವಮಾನ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಸಂಸದ ಕ್ಯಾ‌.ಬ್ರಿಜೇಶ್ ಚೌಟ ವಿರುದ್ಧ ಬಿಜೆಪಿ ಮಂಡಲ ಉಪಾಧ್ಯಕ್ಷನಿಂದಲೇ ಅಸಮಾಧಾನ ವ್ಯಕ್ತವಾಗಿದ್ದು, ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದವರಿಗೆ ಅವಮಾನ ಆರೋಪ ಕೇಳಿಬಂದಿದೆ. ಸಂಸದರು ಬೇಜವಾಬ್ದಾರಿ ವರ್ತನೆ ತೋರಿದ್ದಾರೆ ಎಂದೂ ದೂರಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಹಾಕಿ ಮೂಲ್ಕಿ-ಮೂಡಬಿದ್ರೆ ಬಿಜೆಪಿ ಉಪಾಧ್ಯಕ್ಷ ಸೂರಜ್ ಜೈನ್ ಕಿಡಿ ಕಾರಿದ್ದಾರೆ. ಮೂಡಬಿದಿರೆಯ ಬನ್ನಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು

ದ.ಕ ಸಂಸದ ಬ್ರಿಜೇಶ್ ಚೌಟ ವಿರುದ್ದ ಭುಗಿಲೆದ್ದ ಸ್ವಪಕ್ಷೀಯರ ಅಸಮಾಧಾನ| ರಸ್ತೆ ಸಮಸ್ಯೆಗೆ ಪರಿಹಾರ ಕೇಳ ಹೋದವರಿಗೆ ಸಂಸದರಿಂದ ಅವಮಾನ!? Read More »

ಹವಾಮಾನ ವರದಿ| ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ| ಮೇ.26ಕ್ಕೆ ಕೇರಳ ಪ್ರವೇಶ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಅನ್ನದಾತರಿಗೆ ಹವಾಮಾನ ಇಲಾಖೆಯು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಪ್ರತಿ ವರ್ಷ ಜೂನ್ ತಿಂಗಳ ಆರಂಭದಲ್ಲಿ ಬರುವ ಮುಂಗಾರು ಮಳೆ, ಈ ಬಾರಿ ವಾಡಿಕೆಗಿಂತ ಒಂದು ವಾರ ಮುಂಚಿತವಾಗಿಯೇ ಅಪ್ಪಳಿಸಲಿದೆ. ಮೇ 26ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲೇ ಕರ್ನಾಟಕದ ಮಣ್ಣನ್ನು ತಣಿಸಲಿದೆ. ಹವಾಮಾನ ಇಲಾಖೆಯ ಈ ಮುನ್ಸೂಚನೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ, ಮುಂದಿನ 3 ದಿನಗಳ ಕಾಲ ಇಡೀ ರಾಜ್ಯಾದ್ಯಂತ

ಹವಾಮಾನ ವರದಿ| ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಆಗಮನ| ಮೇ.26ಕ್ಕೆ ಕೇರಳ ಪ್ರವೇಶ ಸಾಧ್ಯತೆ Read More »

ರಾಜ್ಯದಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ| ಮಧ್ಯರಾತ್ರಿಯಿಂದಲೇ ನೂತನ ದರ ಜಾರಿ

ಸಮಗ್ರ ನ್ಯೂಸ್: ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಬರೆ ಬಿದ್ದಿದೆ. ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಇಂಧನ ದರ ಏರಿಕೆಯಾಗುತ್ತಿರುವ ಬೆನ್ನಲ್ಲೇ, ರಾಜ್ಯದ ಖಾಸಗಿ ಬಸ್ ಮಾಲೀಕರು ಇಂದಿನಿಂದಲೇ ಜಾರಿಗೆ ಬರುವಂತೆ ಟಿಕೆಟ್ ದರವನ್ನು ಶೇಕಡಾ 20 ರಿಂದ 30 ರಷ್ಟು ಹೆಚ್ಚಿಸಿದ್ದಾರೆ. ಡೀಸೆಲ್ ಬೆಲೆಯಲ್ಲಿ 3 ರೂಪಾಯಿ ಏರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರಮುಖ ನಗರಗಳಿಗೆ ಸಂಚರಿಸುವ ಪ್ರಯಾಣಿಕರ ಜೇಬಿಗೆ ಈಗ ನೇರ ಹೊರೆ ಬೀಳಲಿದೆ. ಹೌದು, ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಕಚ್ಚಾ

ರಾಜ್ಯದಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ| ಮಧ್ಯರಾತ್ರಿಯಿಂದಲೇ ನೂತನ ದರ ಜಾರಿ Read More »