ರಾಜ್ಯದ ‌ಎಲ್ಲಾ‌ ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್ – ಸಿಎಂ ಡಿಕೆಶಿ

ಸಮಗ್ರ ನ್ಯೂಸ್: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ನೂತನ ಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಆ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ ಘೋಷಿಸಿದ್ದಾರೆ. ಇದಕ್ಕಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆಯೂ ತಿಳಿಸಿದ್ದಾರೆ.

. Ad Widget . Ad Widget . Ad Widget .

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರೆಂಟಿ ನೀಡಿತ್ತು. ಇದೀಗ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಗಂಡು ಮಕ್ಕಳಿಗೂ ಉಚಿತ ಪಾಸ್ ನೀಡಲಾಗುತ್ತದೆ ಎಂದಿದ್ದಾರೆ. ಈ ಮೂಲಕ ರಾಜ್ಯದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಉಚಿತವಾಗಿ ಸಾರಿಗೆ ಬಸ್‌ನಲ್ಲಿ ಪ್ರಯಾಣ ಮಾಡಬುಹುದು. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಡಿಕೆ ಶಿವಕುಮಾರ್ ಘೋಷಣೆ ಹೊರಬೀಳುತ್ತಿದ್ದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಖುಷಿಪಟ್ಟಿದ್ದಾರೆ. ಶಾಲಾ ಕಾಲೇಜುಗಳು ಶುಲ್ಕಗಳು ದುಬಾರಿಯಾಗುವು ಈಗಿನ ಪರಿಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಘೋಷಣೆ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಈ ಕುರಿತು ಪೋಷಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಅಭಿವೃದ್ಧಿ ಕುರಿತ ರೂಪುರೇಶೆ ಮುಂದಿದ್ದಾರೆ. ಪ್ರಮುಖವಾಗಿ ರೈತರ ಸಮಸ್ಯೆಗಳ ಬಗ್ಗೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ನೀರಾವರಿ ಸಮಸ್ಯೆ ಬಗೆ ಹರಿಸಲು ತಜ್ಞರ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಕಸದ ಸಮಸ್ಯೆ ತೀವ್ರಗೊಳ್ಳುತ್ತಿದೆ. ಹೀಗಾಗಿ ಈ ಸಂದರ್ಭದಲ್ಲಿ ಸುಮ್ಮನೆ ಮಾತುಕೊಟ್ಟರೆ ಆಗುವುದಿಲ್ಲ. ಹೀಗಾಗಿ ಸಮಸ್ಯೆ ಕುರಿತು ಪರಿಶೀಲಿಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.

Leave a Comment

Your email address will not be published. Required fields are marked *