ಸಮಗ್ರ ನ್ಯೂಸ್: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ಹೋಂಸ್ಟೇ ನಲ್ಲಿ ಮೈಸೂರಿನ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿನುತಾ(27) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆ ನಿವಾಸಿಯಾಗಿರುವ ಜಗನ್ನಾಥ ಮತ್ತು ರೇಣುಕಾ ದಂಪತಿಯ ಪುತ್ರಿ ವಿನುತಾ ಸೇರಿದಂತೆ 14 ಜನರ ತಂಡ ಕೊಡಗು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ವಿನುತಾ ಕುಸಿದು ಬಿದ್ದು ಮೃತಪಟ್ಟಿದ್ದರು.
ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಕೆಟ್ ಒಳಗೆ ತಲೆ ಮುಳುಗಿದ ಸ್ಥಿತಿಯಲ್ಲಿ ವಿನುತಾ ಶವ ಪತ್ತೆಯಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








