ಸಮಗ್ರ ನ್ಯೂಸ್: ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನ ಕೆಲವು ನಟ-ನಟಿಯರಿಗೆ ಈ ಇಡಿ ಸಂಕಷ್ಟ ಎದುರಾಗಿದೆ.
ಶಿವಂ ಅಸೋಸಿಯೇಟ್ಸ್ ಮಾಲಿಕ ಶಿವಾನಂದ ನೀಲಣ್ಣವರ್ ಸಾರ್ವಜನಿಕರ ಹೂಡಿಕೆ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ.
ಶಿವಾನಂದ ತಮ್ಮ ಪ್ರಚಾರಕ್ಕಾಗಿ ಹೂಡಿಕೆದಾರರ ಹಣ ಬಳಸಿ ಸ್ಯಾಂಡಲ್ ವುಡ್ ತಾರೆಯರನ್ನು ಕರೆಸಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಆರೋಪವಿದೆ.
ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರಾದ ನೀನಾಸಂ ಸತೀಶ್, ವಸಿಷ್ಠ ಸಿಂಹ, ಸಪ್ತಮಿ ಗೌಡ, ಡಾಲಿ ಧನಂಜಯ, ರಾಗಿಣಿ ದ್ವಿವೇದಿ ಸೇರಿದಂತೆ ಹಲವು ನಟ ನಟಿಯರು ಬಂದು ಮನರಂಜನೆ ನೀಡಿದ್ದರು. ಆದರೆ ಇದೇ ಈ ನಟರಿಗೆ ಈಗ ಕುತ್ತಾಗಿದೆ.
ಶಿವಾನಂದ ಪ್ರಕರಣದ ವಿಚಾರಣೆ ಸದ್ಯಕ್ಕೆ ಸಿಐಡಿ ನಡೆಸುತ್ತಿದೆ. ಆದರೆ ಹಣಕಾಸಿನ ವಂಚನೆ ಪ್ರಕರಣವಾಗಿರುವುದರಿಂದ ಇಡಿ ಎಂಟ್ರಿಯಾಗಲಿದೆ. ಹೀಗಾಗಿ ಈಗ ಈ ಸ್ಟಾರ್ ನಟರಿಗೂ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಸಾಧ್ಯತೆಯಿದೆ.








