ಸಮಗ್ರ ನ್ಯೂಸ್: ರಸ್ತೆ ಬದಿ ಹಾದು ಹೋಗುವ ವಿದ್ಯುತ್ ಕಂಬಗಳ ಸಹಿತ ರಸ್ತೆಯನ್ನು ಕಾಂಕ್ರೀಟೀಕರಣ ಮಾಡಿದ ವಿಲಕ್ಷಣ ಘಟನೆ ಸುಳ್ಯದಲ್ಲಿ ಬೆಳಕಿಗೆ ಬಂದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗುಲ್ಲೆಬ್ಬಿಸುತ್ತಿದೆ.
ಸುಳ್ಯದ ಪ.ಪೂ ಕಾಲೇಜು ಬಳಿಯಿಂದ ಶಾಸ್ತ್ರಿ ಸರ್ಕಲ್ಗೆ ಹೋಗುವ ಒಳರಸ್ತೆಯಿದು. ಇಲ್ಲಿ ಸ್ಥಳೀಯ ಆಡಳಿತ ರಸ್ತೆಯನ್ನು ಅಭಿವೃದ್ಧಿ ಮಾಡಲು ಕಾಂಕ್ರಿಟೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಗುತ್ತಿಗೆದಾರ ಹಾಗೂ ಇಂಜಿನಿಯರ್ ರ ಜುಗಲ್ ಬಂದಿಗೆ ರಸ್ತೆಯ ಬದಿಯ ವಿದ್ಯುತ್ ಕಂಬಗಳನ್ನು ಸೇರಿಸಿ ರಸ್ತೆ ನಿರ್ಮಿಸಲಾಗಿದೆ.
ರಸ್ತೆಗೆ ಡಿವೈಡರ್ ಹಾಕಿದಂತೆ ಕಂಬಗಳು ಕಾಣುತ್ತಿದ್ದು ಈ ರಸ್ತೆಯಲ್ಲಿ ಓಡಾಟ ನಡೆಸಿದರೆ ಶಿವನ ಪಾದ ಸೇರುವ ಅವಕಾಶ ತಪ್ಪದು. ಯಾರೋ ಎಸಗಿದ ಪಾಪದ ಕೆಲಸಕ್ಕೆ ಸಾರ್ವಜನಿಕರು ಬಲಿಯಾಗುವ ಮುನ್ನ ಆಡಳಿತ ವರ್ಗ ಇದಕ್ಕೊಂದು ಕ್ರಮ ಕೈಗೊಳ್ಳಬೇಕಿದೆ.
ಸಾರ್ವಜನಿಕ ತೆರಿಗೆ ಹಣ ಈ ರೀತಿಯಲ್ಲಿ ಪೋಲಾಗುತ್ತಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.







