June 2026

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ – ಸಚಿವ ಬೈರತಿ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಭಾರೀ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಐತಿಹಾಸಿಕ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಇನ್ನೆರಡು ದಿನಗಳೊಳಗೆ ಅದರ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಇದುವರೆಗೆ ಉಚಿತ ಬಸ್ ಪಾಸ್ ಸೌಲಭ್ಯವು ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ವಿಸ್ತರಿಸುವ ಮಹತ್ವದ ನಿರ್ಧಾರ […]

ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ – ಸಚಿವ ಬೈರತಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಬಹುಚರ್ಚಿತ “ಬುರುಡೆ ಕೇಸ್” ಪ್ರಕರಣಕ್ಕೆ ಈಗ ಅತ್ಯಂತ ಸ್ಫೋಟಕ ತಿರುವು ಸಿಕ್ಕಿದೆ. ಈ ಇಡೀ ಪ್ರಕರಣವು ಧರ್ಮಸ್ಥಳ ಕ್ಷೇತ್ರ ಮತ್ತು ಹೆಗ್ಗಡೆಯವರ ವಿರುದ್ಧ ನಡೆದ ದೊಡ್ಡ ಮಟ್ಟದ ಪಿತೂರಿ ಎಂದು ಆರೋಪಿಸಿ, ಪ್ರಕರಣದ ಪ್ರಮುಖ ವ್ಯಕ್ತಿ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾನೆ. ವಿಶೇಷವೆಂದರೆ, ಈ ಅರ್ಜಿಯಲ್ಲಿ ಆತ ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಪ್ರಮುಖರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಇದು ಕರಾವಳಿ ಹಾಗೂ ರಾಜ್ಯರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಧರ್ಮಸ್ಥಳ ಬುರುಡೆ ಪ್ರಕರಣ| ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿದ ಚಿನ್ನಯ್ಯ Read More »

ಇಂದು(ಜೂ.12) ತಮಿಳುನಾಡು ಸಿಎಂ ವಿಜಯ್ ಕೊಲ್ಲೂರಿಗೆ ಭೇಟಿ; ಬಿಗಿ ಭದ್ರತೆ

ಸಮಗ್ರ ನ್ಯೂಸ್: ತಮಿಳುನಾಡು ಸಿಎಂ ಜೋಸೆಫ್​​ ವಿಜಯ್ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಸಿಎಂ ವಿಜಯ್ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ಹಿನ್ನೆಲೆ ಉಡುಪಿ ಜಿಲ್ಲಾ ಪೊಲೀಸರು ಪ್ರಕಟಣೆ ಹೊರಡಿಸಿದ್ದು, ನಾಗರಿಕರು ಮತ್ತು ಭಕ್ತರಿಗೆ ಕೆಲ ಸೂಚನೆಗಳನ್ನು ನೀಡಿದ್ದಾರೆ. ತಮಿಳುನಾಡು ಸಿಎಂ ಜೋಸೆಫ್​ ವಿಜಯ್​​, ಜೂನ್ 12ರಂದು ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಕೈಗೊಳ್ಳಲಿದ್ದಾರೆ. ವಿಜಯ್​ ಭೇಟಿ ಹಿನ್ನೆಲೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಎಂ ವಿಜಯ್​ ಸಂಚರಿಸುವ ಮಾರ್ಗದಲ್ಲಿ, ದೇವಸ್ಥಾನದ ಸುತ್ತಮುತ್ತಲು ಬಿಗಿ ಬಂದೋಬಸ್ತ್​

ಇಂದು(ಜೂ.12) ತಮಿಳುನಾಡು ಸಿಎಂ ವಿಜಯ್ ಕೊಲ್ಲೂರಿಗೆ ಭೇಟಿ; ಬಿಗಿ ಭದ್ರತೆ Read More »

ಕೊನೆಕ್ಷಣದಲ್ಲಿ ಯೂಟರ್ನ್ ಹೊಡೆದ ಟ್ರಂಪ್| ಅಮೇರಿಕಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಕಾರಣವೇನು?

ಸಮಗ್ರ ನ್ಯೂಸ್: ಇರಾನ್ ವಿರುದ್ಧ ನಡೆಸಲು ನಿಗದಿಯಾಗಿದ್ದ ಮಿಲಿಟರಿ ಕಾರ್ಯಾಚರಣೆ ಹಾಗೂ ಭೀಕರ ಬಾಂಬ್ ದಾಳಿಗಳನ್ನು ಕೊನೆ ಕ್ಷಣದಲ್ಲಿ ರದ್ದುಪಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಇರಾನ್‌ನ ಉನ್ನತ ನಾಯಕರೊಂದಿಗೆ ನಡೆಸಲಾದ ರಾಜತಾಂತ್ರಿಕ ಮಾತುಕತೆಗಳು ಅತ್ಯಂತ ಮಹತ್ವದ ಹಂತವನ್ನು ತಲುಪಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮದೇ ಒಡೆತನದ ‘ಟ್ರೂತ್ ಸೋಷಿಯಲ್’ (Truth Social) ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂದೇಶ ಪ್ರಕಟಿಸಿರುವ ಡೊನಾಲ್ಡ್ ಟ್ರಂಪ್, ಇರಾನ್‌ನ ಅತ್ಯುನ್ನತ

ಕೊನೆಕ್ಷಣದಲ್ಲಿ ಯೂಟರ್ನ್ ಹೊಡೆದ ಟ್ರಂಪ್| ಅಮೇರಿಕಾ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಕಾರಣವೇನು? Read More »

ಒಂಟಿ ಪುರುಷರಿಗೂ ಸಿಗಲಿದೆ 6 ತಿಂಗಳ ‘ಶಿಶುಪಾಲನಾ ರಜೆ’

ಸಮಗ್ರ ನ್ಯೂಸ್: ರಾಜ್ಯದ ಒಂಟಿ ಪುರುಷ ಸರ್ಕಾರಿ ನೌಕರರಿಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಇದುವರೆಗೆ ಕೇವಲ ಮಹಿಳಾ ಉದ್ಯೋಗಿಗಳಿಗೆ ಮಾತ್ರ ಸೀಮಿತವಾಗಿದ್ದ ‘ಶಿಶುಪಾಲನಾ ರಜೆ’ ಸೌಲಭ್ಯವನ್ನು ಇದೀಗ ಒಂಟಿ ಪುರುಷ ನೌಕರರಿಗೂ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದು ಕೇವಲ ಆಡಳಿತಾತ್ಮಕ ಬದಲಾವಣೆಯಷ್ಟೇ ಅಲ್ಲದೆ, ಮಕ್ಕಳ ಹಕ್ಕು ಮತ್ತು ಅವರ ಪಾಲನೆಯನ್ನು ಗಮನದಲ್ಲಿಟ್ಟುಕೊಂಡು ಕೈಗೊಂಡಿರುವ ಅತ್ಯಂತ ಮಾನವೀಯ ಹೆಜ್ಜೆಯಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಂದೆ-ತಾಯಿ ಇಬ್ಬರ ಆಸರೆಯೂ ಮುಖ್ಯ. ಆದರೆ ಅನಿವಾರ್ಯ ಕಾರಣಗಳಿಂದ

ಒಂಟಿ ಪುರುಷರಿಗೂ ಸಿಗಲಿದೆ 6 ತಿಂಗಳ ‘ಶಿಶುಪಾಲನಾ ರಜೆ’ Read More »

ರಾಜ್ಯಸಭಾ ಚುನಾವಣೆ| ಕಾಂಗ್ರೆಸ್ ನ ಮೂವರು, ಬಿಜೆಪಿಯ ಒಬ್ಬರು ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಘೋಷಣೆಯಾಗಿದ್ದ ದ್ವೈವಾರ್ಷಿಕ ಚುನಾವಣೆಯ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಇಂದು ಕಡೆಯ ದಿನವಾಗಿದ್ದು, ಕಣದಲ್ಲಿದ್ದ ಏಕೈಕ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಅವಿರೋಧ ಆಯ್ಕೆ ನಿಶ್ಚಿತವಾಗಿದೆ. ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅವಿರೋಧವಾಗಿ

ರಾಜ್ಯಸಭಾ ಚುನಾವಣೆ| ಕಾಂಗ್ರೆಸ್ ನ ಮೂವರು, ಬಿಜೆಪಿಯ ಒಬ್ಬರು ಅವಿರೋಧ ಆಯ್ಕೆ Read More »

ಹವಾಮಾನ ವರದಿ| ಜೂ.15ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಜೂನ್ 15 ರವರೆಗೂ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ ಹಾಗೂ ಮುಂದಿನ 48 ಗಂಟೆ ಬೆಂಗಳೂರಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಹವಾಮಾನ ವರದಿ| ಜೂ.15ರವರೆಗೆ ಭಾರೀ ಮಳೆ ಸಾಧ್ಯತೆ Read More »

ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವು

ಸಮಗ್ರ ನ್ಯೂಸ್: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಹೆರಂಜೆಯಲ್ಲಿ ಮಂಗಳವಾರ(ಜೂ.9) ನಡೆದಿದೆ. ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಗೃಹಿಣಿ ಸುಚಿತ್ರಾ ದಂಪತಿಯ ಪುಟ್ಟ ಕಂದಮ್ಮನೇ ವಿಧಿಯಾಟಕ್ಕೆ ಬಲಿಯಾದ ದುರ್ದೈವಿ. ಮಂಗಳವಾರ ತಾಯಿ ಸುಚಿತ್ರಾ ಅವರು ತಮ್ಮ 6 ವರ್ಷದ ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೊರಟಿದ್ದರು. ಎಂದಿನಂತೆ ಚಿಕ್ಕ ಮಗುವನ್ನು ಮನೆಯಲ್ಲಿ ಬಿಟ್ಟು ಹೋಗುವ ಬದಲು,

ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ತೆಂಗಿನಕಾಯಿ ಬಿದ್ದು ಸಾವು Read More »

ಎಲ್ ನಿನೋ ಅಬ್ಬರಕ್ಕೆ ಕ್ಷೀಣಗೊಂಡ ಮುಂಗಾರು| ಭಾರತದ ಕೃಷಿ ಆರ್ಥಿಕತೆ ಕಂಗಾಲು

ಸಮಗ್ರ ನ್ಯೂಸ್: ವಿಶ್ವದ ಹವಾಮಾನ ವ್ಯವಸ್ಥೆಯನ್ನೇ ಏರುಪೇರು ಮಾಡುವ ‘ಎಲ್ ನಿನೋ’ (El Nino) ಹವಾಮಾನ ಪ್ರಕ್ರಿಯೆ ಪೆಸಿಫಿಕ್ ಮಹಾಸಾಗರದಲ್ಲಿ ಅಧಿಕೃತವಾಗಿ ಆರಂಭವಾಗಿದೆ ಎಂದು ಜಪಾನ್ ಹವಾಮಾನ ಇಲಾಖೆ ಘೋಷಿಸಿದೆ. ಈ ಪ್ರಕಟಣೆಯು ಭಾರತದ ರೈತರು ಹಾಗೂ ಹವಾಮಾನ ತಜ್ಞರಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಭಾರತದಲ್ಲಿ ಸುಡುವ ಬೇಸಿಗೆ ಮತ್ತು ದುರ್ಬಲ ಮುಂಗಾರು ಮಳೆಗೆ ಕಾರಣವಾಗುವ ಈ ಎಲ್ ನಿನೋ, ಈ ಬಾರಿ ಭಾರತದ ಕೃಷಿ ವಲಯದ ಮೇಲೆ ನೇರ ಪರಿಣಾಮ ಬೀರಲು ಹೊಂಚು ಹಾಕುತ್ತಿದೆ.

ಎಲ್ ನಿನೋ ಅಬ್ಬರಕ್ಕೆ ಕ್ಷೀಣಗೊಂಡ ಮುಂಗಾರು| ಭಾರತದ ಕೃಷಿ ಆರ್ಥಿಕತೆ ಕಂಗಾಲು Read More »

ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ| ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕ ಸರಕಾರ ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಕರ್ನಾಟಕ ರಾಜ್ಯದಾದ್ಯಂತ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗಿದೆ. ಆದರೆ ಈ ಯೋಜನೆಯ ದುರುಪಯೋಗ ತಡೆಗೆ ಕರ್ನಾಟಕ ಸರಕಾರ ಸ್ಮಾರ್ಟ್‌ ಕಾರ್ಡ್‌ ಕಡ್ಡಾಯಗೊಳಿಸಿದೆ. ಹಾಗಾದ್ರೆ ಸ್ಮಾರ್ಟ್‌ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ ? ಸ್ಮಾರ್ಟ್‌ ಕಾರ್ಡ್‌ ಇಲ್ಲದೇ ಬಸ್‌ ಪ್ರಯಾಣ ಸಾಧ್ಯವಿಲ್ಲವೇ ಅನ್ನೋ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ. ಶಕ್ತಿ ಯೋಜನೆಯನ್ನು ಸಾಕಷ್ಟು ಮಂದಿ ದುರುಪಯೋಗ ಪಡಿಸಿಕೊಳ್ತಿದ್ದಾರೆ ಅನ್ನೋ ಸಾಕಷ್ಟು ದೂರುಗಳು

ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ| ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ? Read More »