July 2026

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು

ಸಮಗ್ರ ನ್ಯೂಸ್: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ನೀಡಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಅರ್ಜಿ ವಿತರಣೆ ನಡೆಸಿದ ಹೈಕೋರ್ಟ್ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಹೈಕೋರ್ಟ್ ಜಾಮೀನು ನೀಡಿದ್ದು ಐದು ಲಕ್ಷ ಬಾಂಡ್ ಹಾಗೂ ಶೂರಿಟಿ […]

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು Read More »

ಪತ್ನಿ ಹಾಗೂ ಏಳು ತಿಂಗಳ ಮಗಳನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪತಿ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು 7 ತಿಂಗಳ ಹೆಣ್ಣು ಮಗುವನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ಬಳ್ಳಾರಿ ನಗರದ ಅಂದ್ರಾಳ ಪ್ರದೇಶದ ಮನೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ರಾಜೇಶ್ವರಿ ಮತ್ತು ಪುತ್ರಿ ಅಶ್ವಿನಿ ಮೃತಪಟ್ಟವರು. ಪತಿ ಹೊನ್ನೂರಸ್ವಾಮಿ ಸುತ್ತಿಗೆಯಿಂದ ಹೊಡೆದು ಪತ್ನಿ ಹಾಗೂ ಪುತ್ರಿಯನ್ನು ಕೊಲೆಗೈದು ಪರಾರಿಯಾಗಿದ್ದಾನೆ. ದಂಪತಿ ನಡುವೆ ಕೆಲ ದಿನಗಳಿಂದ ಜಗಳವಾಗಿದ್ದು, ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಆರೋಪಿ ಕೊಲೆಗೈದ ಶಂಕೆ ವ್ಯಕ್ತವಾಗಿದೆ. ಎಪಿಎಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ

ಪತ್ನಿ ಹಾಗೂ ಏಳು ತಿಂಗಳ ಮಗಳನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪತಿ Read More »

ಪಾಕಿಸ್ತಾನದಲ್ಲಿ ಭಾರೀ ಗಣಿ ದುರಂತ| ಮೀಥೇನ್ ಗ್ಯಾಸ್ ಸ್ಪೋಟಕ್ಕೆ 32‌ ಮಂದಿ ಬಲಿ

ಸಮಗ್ರ ನ್ಯೂಸ್: ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾ ಹೊರವಲಯದಲ್ಲಿ ಸಂಭವಿಸಿದ ಭೀಕರ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು ದುರಂತ ಅಂತ್ಯ ಕಂಡಿದ್ದಾರೆ. ಗಣಿಯ ಆಳದಲ್ಲಿ ಮೀಥೇನ್ ಅನಿಲ ಅತಿಯಾಗಿ ಸಂಗ್ರಹಗೊಂಡು ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ದುರಂತದ ವೇಳೆ ಗಣಿಯೊಳಗೆ 40ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳಲ್ಲಿ 7 ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ತದನಂತರ ನಡೆದ

ಪಾಕಿಸ್ತಾನದಲ್ಲಿ ಭಾರೀ ಗಣಿ ದುರಂತ| ಮೀಥೇನ್ ಗ್ಯಾಸ್ ಸ್ಪೋಟಕ್ಕೆ 32‌ ಮಂದಿ ಬಲಿ Read More »

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಜುಲೈ 30ರ ಮಲ ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ನೀಡಿದೆ. ರಾಜ್ಯದ ಹಾಸನ, ಕೊಡಗು, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಜುಲೈ 30ರಂದು, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಜುಲೈ 31ರಂದು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾಸನ ಹಾಗೂ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಆಗಸ್ಟ್‌ 1ರಂದು ಭಾರೀ ಮಳೆಯಾಗಲಿದ್ದು ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಜ್ಯದ

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ Read More »

ಧರ್ಮಸ್ಥಳ ಅಸ್ಥಿಪಂಜರ ಪ್ರಕರಣ| ಡಿಎನ್ಎ ಮೂಲಕ ಮೂವರ ಗುರುತು ಪತ್ತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್‌ಐಟಿ (SIT) ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ವಿಶೇಷವೆಂದರೆ, ಹತ್ಯೆಗೊಳಗಾದವರೆಲ್ಲರೂ ಮಹಿಳೆಯರು ಎಂಬ ಆರೋಪಗಳ ನಡುವೆ, ಪ್ರಸ್ತುತ ಡಿಎನ್‌ಎ ದೃಢಪಟ್ಟಿರುವ ಮೂವರೂ ಪುರುಷರು ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿಂದ ಸಂಗ್ರಹಿಸಲಾಗಿದ್ದ ಡಿಎನ್‌ಎ ಮಾದರಿಗಳು ಅಸ್ಥಿಪಂಜರಗಳಿಗೆ ಸಂಪೂರ್ಣ ಹೊಂದಾಣಿಕೆಯಾಗಿವೆ:ಯು.ಬಿ. ಅಯ್ಯಪ್ಪ (70): ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ನಿವಾಸಿ. 2017ರ ಜೂನ್

ಧರ್ಮಸ್ಥಳ ಅಸ್ಥಿಪಂಜರ ಪ್ರಕರಣ| ಡಿಎನ್ಎ ಮೂಲಕ ಮೂವರ ಗುರುತು ಪತ್ತೆ Read More »

ರಾಜ್ಯದ 66.64 ಲಕ್ಷ ಮತದಾರರು ಪಟ್ಟಿಯಿಂದ ಹೊರಗುಳಿಯುವ ಭೀತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಈಗ ಅಂತಿಮ ಹಾಗೂ ಅತ್ಯಂತ ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಪ್ರಕ್ರಿಯೆಯ ಅಂತ್ಯಕ್ಕೆ ಸುಮಾರು 86.64 ಲಕ್ಷ (ಶೇ.15.63) ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗುವ ಭೀತಿ ಎದುರಾಗಿದೆ. ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ‘ಬಿಎಲ್‌ಒ’ಗಳು ನಡೆಸಿದ ಮನೆ-ಮನೆ ಸಮೀಕ್ಷೆಯಲ್ಲಿ ಇಷ್ಟೊಂದು ಬೃಹತ್‌ ಸಂಖ್ಯೆಯ ‘ಎಎಸ್‌ಡಿಡಿಒ’ (ಅನುಮಾನಾಸ್ಪದ/ಸ್ಥಳಾಂತರಗೊಂಡ/ಮೃತ/ದ್ವಿಪ್ರತಿ) ಮತದಾರರು ಪತ್ತೆಯಾಗಿದ್ದಾರೆ. ಜೂನ್‌ 30ರಿಂದ ಆರಂಭಗೊಂಡಿದ್ದ ಈ ಬೃಹತ್‌ ಪರಿಷ್ಕರಣೆ

ರಾಜ್ಯದ 66.64 ಲಕ್ಷ ಮತದಾರರು ಪಟ್ಟಿಯಿಂದ ಹೊರಗುಳಿಯುವ ಭೀತಿ Read More »

ಬ್ರಾಹ್ಮೀ ಮುಹೂರ್ತದಲ್ಲಿ ‘ರಾಮಾಯಣ’ ಟ್ರೇಲರ್ ರಿಲೀಸ್

ಸಮಗ್ರ ನ್ಯೂಸ್: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ದ ಟ್ರೇಲರ್ ಕೊನೆಗೂ ಬಿಡುಗಡೆಯಾಗಿದೆ. ಹಲವು ದಿನಗಳಿಂದ ಈ ಟ್ರೇಲರ್‌ಗಾಗಿ ಕಾಯುತ್ತಿದ್ದ ಸಿನಿಪ್ರಿಯರಿಗೆ ಚಿತ್ರತಂಡ ಭರ್ಜರಿ ಉಡುಗೊರೆಯನ್ನೇ ನೀಡಿದೆ. ಬ್ರಾಹ್ಮಿ ಮುಹೂರ್ತದ ವಿಶೇಷ ಸಂದರ್ಭದಲ್ಲಿ ವಿಶ್ವದಾದ್ಯಂತ ಟ್ರೇಲರ್ ಅನಾವರಣಗೊಂಡಿದ್ದು, ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರತಂಡ ಮೊದಲೇ ಘೋಷಿಸಿದ್ದಂತೆ ಟ್ರೇಲರ್ ಅನ್ನು ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟರ್ ಹಂಚಿಕೊಂಡು ಈ ನಿರ್ಧಾರವನ್ನು ಪ್ರಕಟಿಸಿದ್ದರು.

ಬ್ರಾಹ್ಮೀ ಮುಹೂರ್ತದಲ್ಲಿ ‘ರಾಮಾಯಣ’ ಟ್ರೇಲರ್ ರಿಲೀಸ್ Read More »

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ‌ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಬುಧವಾರ ತೀವ್ರ ಗದ್ದಲ ಮತ್ತು ವಾಕ್ಸಮರದ ನಡುವೆಯೇ ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ-2026 ಧ್ವನಿಮತದ ಮೂಲಕ ಅಂಗೀಕಾರವಾಯಿತು. ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ದೇಶಾದ್ಯಂತ ಉಂಟಾದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು.ಇದೇ ವೇಳೆ, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್

ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ‌ಮಸೂದೆ ಅಂಗೀಕಾರ Read More »

ರಾಜ್ಯಸಭೆಯಲ್ಲಿ ‘ವಂದೇ ಮಾತರಂ’ ತಿದ್ದುಪಡಿ ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ‘ವಂದೇ ಮಾತರಂ’ ರಾಷ್ಟ್ರಗೀತೆಗೆ ಗೌರವ ಸೂಚಿಸದೆ ಅಪಮಾನಿಸುವುದನ್ನು ಅಪರಾಧವೆಂದು ಪರಿಗಣಿಸುವ ಮಹತ್ವದ ‘ರಾಷ್ಟ್ರೀಯ ಗೌರವಕ್ಕಾಗುವ ಅಪಮಾನ ತಡೆ (ತಿದ್ದುಪಡಿ) ಮಸೂದೆ – 2026’ ಅನ್ನು ಬುಧವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಸಂಸತ್ತಿನ ಕಾರ್ಯಕಲಾಪಗಳ ಪಟ್ಟಿಯಲ್ಲಿದ್ದಂತೆ ಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ಈ ಮಸೂದೆಯನ್ನು ಮೇಲ್ಮನೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗಿತ್ತು. ಈ ಮಹತ್ವದ ಮಸೂದೆಯ ಚರ್ಚೆಯ ವೇಳೆಯೂ ಪ್ರತಿಪಕ್ಷಗಳ ನಾಯಕರು ತೀವ್ರ ಪ್ರತಿಭಟನೆ ಹಾಗೂ ಘೋಷಣೆಗಳನ್ನು ಕೂಗಿದರು. ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ನಡೆದ ‘ನೀಟ್’ ಪರೀಕ್ಷಾ ಅಕ್ರಮದ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ

ರಾಜ್ಯಸಭೆಯಲ್ಲಿ ‘ವಂದೇ ಮಾತರಂ’ ತಿದ್ದುಪಡಿ ಮಸೂದೆ ಅಂಗೀಕಾರ Read More »

ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮತ್ತೆ ಚೇತರಿಕೆ ಲಕ್ಷಣ ಕಂಡ ಮುಂಗಾರು

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಜುಲೈ 29ರಿಂದ 31ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್

ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮತ್ತೆ ಚೇತರಿಕೆ ಲಕ್ಷಣ ಕಂಡ ಮುಂಗಾರು Read More »