July 2026

ಜು.5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ 24 ಗಂಟೆಗಳಲ್ಲಿ ಉಡುಪಿಯ ಸಿದ್ದಾಪುರ ಹಾಗೂ ಕಾರವಾರ ಭಾಗದಲ್ಲಿ ಗರಿಷ್ಠ 12 […]

ಜು.5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಇಂದಿನಿಂದ ದೇಶಾದ್ಯಂತ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಜಾರಿ| ಇತಿಹಾಸದ ಪುಟ ಸೇರಿದ ‘ನರೇಗಾ’

ಸಮಗ್ರ ನ್ಯೂಸ್: ಭಾರತದ ಗ್ರಾಮೀಣಾಭಿವೃದ್ಧಿ ಪಥದಲ್ಲಿ ಬದಲಾವಣೆಯೊಂದಕ್ಕೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಕಳೆದ ಎರಡು ದಶಕಗಳಿಂದ ದೇಶದ ಹಳ್ಳಿಗಳ ಆರ್ಥಿಕ ಶಕ್ತಿಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ನರೇಗಾ – 2005) ಅಧಿಕೃತವಾಗಿ ರದ್ದಾಗಲಿದೆ. ಇದರ ಬದಲಿಗೆ ಕೇಂದ್ರ ಸರ್ಕಾರವು ರೂಪಿಸಿರುವ ನೂತನ ವಿಕಸಿತ ಭಾರತ್ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಅಥವಾ ವಿಬಿ-ಜಿ-ರಾಮ್ ಜಿ (VB-G-RAM ಜಿ) ಕಾಯ್ದೆ 2025 ಇಂದಿನಿಂದ (ಜುಲೈ 1) ದೇಶಾದ್ಯಂತ ಜಾರಿಗೆ

ಇಂದಿನಿಂದ ದೇಶಾದ್ಯಂತ ‘ವಿಬಿ ಜಿ ರಾಮ್ ಜಿ’ ಕಾಯ್ದೆ ಜಾರಿ| ಇತಿಹಾಸದ ಪುಟ ಸೇರಿದ ‘ನರೇಗಾ’ Read More »

ಇಂದಿನಿಂದ ರಾಜ್ಯಾದ್ಯಂತ ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆ| ಅನರ್ಹ ಫಲಾನುಭವಿಗಳ ಪತ್ತೆಗೆ ಕ್ರಮ

ಸಮಗ್ರ ನ್ಯೂಸ್: ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ ಮನೆ ಪರಿಶೀಲನೆ ಕಾರ್ಯ ಜುಲೈ 1ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ರಾಜ್ಯದ ಮತದಾರರು ಮತ್ತು ಅರ್ಹರಿಗೆ ಮಾತ್ರ ಗೃಹಜ್ಯೋತಿ ಯೋಜನೆ ನೀಡಲು ಪರಿಶೀಲನೆ ನಡೆಸಲಾಗುವುದು. ಮೀಟರ್ ರೀಡರ್ ಗಳು, ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಲಿದ್ದಾರೆ. 2023ರ ಜುಲೈನಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಾಗಿತ್ತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನು ಪುನರ್ ಪರಿಶೀಲಿಸಲಿದ್ದು, ಫಲಾನುಭವಿಗಳ ದಾಖಲೆ ಪರಿಶೀಲಿಸಿ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆ| ಅನರ್ಹ ಫಲಾನುಭವಿಗಳ ಪತ್ತೆಗೆ ಕ್ರಮ Read More »

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ಕಂಕನಾಡಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಹಳೆಯ ಹಂಚಿನ ಮನೆಯೊಂದರ ಮೇಲ್ಚಾವಣಿ ಹಾಗೂ ಗೋಡೆ ಬುಧವಾರ ಮುಂಜಾನೆ ದಿಢೀರನೆ ಕುಸಿದು ಬಿದ್ದ ಪರಿಣಾಮ, ಮನೆಯೊಳಗೆ ನಿದ್ದೆಯ ಮಂಪರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಎಂದು ಗುರುತಿಸಲಾಗಿದೆ. ಘಟನೆಯ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ

ಮಂಗಳೂರು: ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಸಾವು| ನಿದ್ದೆ ಮಾಡುತ್ತಿದ್ದವರು ಚಿರನಿದ್ರೆಗೆ!! Read More »

ಗ್ರಾಹಕರಿಗೆ ಗುಡ್ ನ್ಯೂಸ್| LPG ದರದಲ್ಲಿ ಗಣನೀಯ ಇಳಿಕೆ

ಸಮಗ್ರ ನ್ಯೂಸ್: ತೈಲ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹183.50 ರಷ್ಟು ಇಳಿಕೆ ಮಾಡಿವೆ. ಆದರೆ, ಗೃಹಬಳಕೆಯ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಸ್ಥಿರವಾಗಿರಿಸಲಾಗಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ. ತಿಂಗಳ ಮೊದಲ ದಿನ ತೈಲ ಕಂಪನಿಗಳು ತೈಲ ಮತ್ತು ಎಲ್‌ಪಿಜಿ ದರ ಪರಿಷ್ಕರಣೆ ಮಾಡುತ್ತವೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮದಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಎಲ್‌ಪಿಜಿ ಸೇರಿದಂತೆ ಬಹುತೇಕ

ಗ್ರಾಹಕರಿಗೆ ಗುಡ್ ನ್ಯೂಸ್| LPG ದರದಲ್ಲಿ ಗಣನೀಯ ಇಳಿಕೆ Read More »