ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಹೆಚ್ಚಿನ ಭಾಗದಲ್ಲಿ ನಾಲ್ಕೈದು ದಿನದಿಂದ ಮುಂಗಾರು ಮಳೆಯಾಗಿ ಬಿಸಿಲ ವಾತಾವರಣ ಶುರುವಾಗಿದೆ. ಎರಡು ದಿನದಿಂದ ಬಿಸಿಲ ಪ್ರಮಾಣ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.

. Ad Widget . Ad Widget . Ad Widget .

ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಗಾಳಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ.) ಕೂಡಿದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಕರ್ನಾಟಕ ಒಂದೆರಡು ಕಡೆಗಳಲ್ಲಿ ಸಾಧಾರಣ ಗಾಳಿ (ಗಂಟೆಗೆ 30-40 ಕಿ.ಮೀ.) ಬೀಸುವ ಸಾಧ್ಯತೆಯಿದೆ.

ಕೊಡಗು ಮತ್ತು ಹಾಸನ ಜಿಲ್ಲೆಗಳು. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಗಾಳಿ (ಗಂಟೆಗೆ 30-40 ಕಿ.ಮೀ.) ಬೀಸುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

Leave a Comment

Your email address will not be published. Required fields are marked *