ಬಸ್ ಗಾಗಿ ಕಾಯುತ್ತಿದ್ದ ಯುವತಿಯ ಬರ್ಬರ ಹತ್ಯೆಗೈದ ಭಗ್ನಪ್ರೇಮಿ| ಹೊಂಚು ಹಾಕಿ ಇರಿದು ಕೊಂದ ಘಟನೆಗೆ ಬೆಚ್ಚಿದ ಕರಾವಳಿ
ಸಮಗ್ರ ನ್ಯೂಸ್: ಬಂಟ್ವಾಳದ ಬಿಸಿರೋಡ್ ಕೆಎಸ್ಆರ್ಟಿಸಿ (KSRTC) ಹೊಸ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಬಸ್ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಅಪರಿಚಿತ ಯುವಕನೊಬ್ಬ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದಾಳಿಗೊಳಗಾದ ಯುವತಿಯನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಯುವತಿಯನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಲಾವಣ್ಯ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳಲು ಬಿ.ಸಿ. ರೋಡ್ […]










