ಪುತ್ತೂರು: ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ ಪ್ರಕರಣ| ಸಿಸಿ ಟಿವಿಯಲ್ಲಿ ದಾಖಲೆಯಲ್ಲಿ ಬಯಲಾಯ್ತು ಅಸಲಿಯತ್ತು!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ದರ್ಬೆಯಲ್ಲಿರುವ ಜೆರಾಕ್ಸ್ ಅಂಗಡಿಯೊಂದರಲ್ಲಿ ನಡೆದ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಟಿವಿ (CCTV) ಕ್ಯಾಮೆರಾ ದೃಶ್ಯಾವಳಿಗಳು ಲಭ್ಯವಾಗಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

. Ad Widget . Ad Widget . Ad Widget .

ಭಾರೀ ರಾಜಕೀಯ ಹಾಗೂ ಸಾರ್ವಜನಿಕ ವಿವಾದಕ್ಕೆ ಕಾರಣವಾಗಿದ್ದ ಈ ಘಟನೆಯ ಅಸಲಿಯತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಾಖಲೆ ಪತ್ರಗಳ ಜೆರಾಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲಕರು ಹಾಗೂ ಬಂದಿದ್ದ ಗ್ರಾಹಕರ ನಡುವೆ ತೀವ್ರ ವಾಗ್ವಾದ ನಡೆಯುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿದೆ. ಈ ವಾಗ್ವಾದದ ನಡುವೆ ಗ್ರಾಹಕರೊಬ್ಬರು ತಮ್ಮ ಮೊಬೈಲ್ ಫೋನ್ ಮೂಲಕ ಘಟನೆಯನ್ನು ಚಿತ್ರೀಕರಿಸಲು ಮುಂದಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇದನ್ನು ಗಮನಿಸಿದ ಅಂಗಡಿ ಮಾಲಕಿ ಅಂಜನಾ ಪೈ ಅವರು ಮೊಬೈಲ್ ವಿಡಿಯೋ ಮಾಡುವುದನ್ನು ತಡೆದಿದ್ದಾರೆ. ಇದರಿಂದ ಕೆರಳಿದ ಅಂಜನಾ ಪೈ ಅವರ ಪುತ್ರ ಸುದರ್ಶನ ಪೈ ತಕ್ಷಣವೇ ಗ್ರಾಹಕನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ತದನಂತರ ಎರಡೂ ಕಡೆಯವರ ನಡುವೆ ತೀವ್ರ ನೂಕಾಟ-ತಳ್ಳಾಟ ಹಾಗೂ ಕೈಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ತಲುಪಿದೆ.

ಪ್ರಕರಣವು ಈಗಾಗಲೇ ದಕ್ಷಿಣ ಕನ್ನಡದಲ್ಲಿ ವಿವಾದವಾಗಿ ರೂಪುಗೊಂಡಿದ್ದು, ಪರ-ವಿರೋಧದ ಆರೋಪಗಳು ಕೇಳಿಬರುತ್ತಿದ್ದವು. ಇದೀಗ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿರುವುದರಿಂದ ಪೊಲೀಸರಿಗೆ ತನಿಖೆಯನ್ನು ನಿಖರವಾಗಿ ಮುನ್ನಡೆಸಲು ಪ್ರಮುಖ ಸಾಕ್ಷಿ ಲಭಿಸಿದಂತಾಗಿದೆ.

Leave a Comment

Your email address will not be published. Required fields are marked *