August 2026

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ| ಆಘಾತ ತಾಳಲಾರದೆ ‌ಭಾವೀ ಪತಿಯೂ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮದುವೆ ನಿಶ್ಚಯವಾಗಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಆಕೆಯ ಭಾವಿ ಪತಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮತ್ತು ಕಣ್ಣೂರು ಅಂಬಲತ್ತಟ್ಟು ನಿವಾಸಿ ವಿ. ಅಮಲ್ (27) ಮೃತಪಟ್ಟ ದುರದೃಷ್ಟಕರ ಜೋಡಿಯಾಗಿದ್ದಾರೆ. ಬ್ಯಾಂಕ್ ಉದ್ಯೋಗಿಗಳಾಗಿದ್ದ ಜೋಡಿ ಮೃತರಿಬ್ಬರೂ ಎಸ್‌ಬಿಐ ಉದ್ಯೋಗಿಗಳಾಗಿದ್ದು, ಅನುಶ್ರೀ ಅವರು ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ಶಾಖೆಯಲ್ಲಿ ಮತ್ತು ಅಮಲ್ ಎರ್ನಾಕುಲಂನ ಎಸ್‌ಬಿಐ […]

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ| ಆಘಾತ ತಾಳಲಾರದೆ ‌ಭಾವೀ ಪತಿಯೂ ಆತ್ಮಹತ್ಯೆಗೆ ಶರಣು Read More »

ಮಂಗಳೂರು – ಬೆಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ರೈಲು ಸಂಚಾರ| ಕರಾವಳಿಗರ ಬಹುದಿನಗಳ ಕನಸು ನನಸು

ಸಮಗ್ರ ನ್ಯೂಸ್: ಕರಾವಳಿ ಭಾಗದ ರೈಲು ಪ್ರಯಾಣಿಕರ ಸುದೀರ್ಘ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಬೆಂಗಳೂರು-ಮಂಗಳೂರು ಸಂಪರ್ಕಿಸುವ ಅತ್ಯಂತ ಸವಾಲಿನ ಘಾಟ್ ರಸ್ತೆಯಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಆಷಾಢ ಅಮಾವಾಸ್ಯೆಯ ಶುಭ ದಿನದಂದು ಚಾಲನೆ ನೀಡಿದೆ. ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಇಂದಿನಿಂದ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರವನ್ನು

ಮಂಗಳೂರು – ಬೆಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ರೈಲು ಸಂಚಾರ| ಕರಾವಳಿಗರ ಬಹುದಿನಗಳ ಕನಸು ನನಸು Read More »

ಇಂದಿನಿಂದ ರಾಜ್ಯ ವಿಧಾನಮಂಡದಲ ಮುಂಗಾರು ಅಧಿವೇಶನ| ರಾಜ್ಯ ಸರ್ಕಾರದ ಕಿವಿ ಹಿಂಡಲು ಪ್ರತಿಪಕ್ಷಗಳು ಸಜ್ಜು

ಸಮಗ್ರ ನ್ಯೂಸ್: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇದು ಮೊದಲ ಪರೀಕ್ಷೆಯಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ವಿಧಾನಮಂಡಲದ ಉಭಯ ಸದನಗಳ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ನೂತನ ಸಚಿವ ಬಿ. ನಾಗೇಂದ್ರ ಅವರ ಸಂಪುಟ ಸೇರ್ಪಡೆ ಮತ್ತು ಬಿಡದಿ ಟೌನ್ ಶಿಪ್ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿ ಪಕ್ಷಗಳಾದ ಬಿಜೆಪಿ- ಜೆಡಿಎಸ್ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಮೊದಲ ದಿನ ಸಂಪ್ರದಾಯದಂತೆ ಆಗಲಿದ ಗಣ್ಯರಿಗೆ

ಇಂದಿನಿಂದ ರಾಜ್ಯ ವಿಧಾನಮಂಡದಲ ಮುಂಗಾರು ಅಧಿವೇಶನ| ರಾಜ್ಯ ಸರ್ಕಾರದ ಕಿವಿ ಹಿಂಡಲು ಪ್ರತಿಪಕ್ಷಗಳು ಸಜ್ಜು Read More »

ಸಾಲದ‌ ಒತ್ತಡಕ್ಕೆ ದಂಪತಿ ಆತ್ಮಹತ್ಯೆ| ಅನಾಥವಾದ ಇಬ್ಬರು ಮಕ್ಕಳು

ಸಮಗ್ರ ನ್ಯೂಸ್: ಆರ್ಥಿಕ ಸಂಕಷ್ಟ ಹಾಗೂ ಸಾಲದ ಒತ್ತಡ ತಾಳಲಾರದೆ ನಿಜಾಮಾಬಾದ್ ನಗರದಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಂದೆ-ತಾಯಿ ಇಬ್ಬರೂ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ. ನಿಜಾಮಾಬಾದ್ ಜಿಲ್ಲೆಯ ಮೆಂಡೋರಾ ಮಂಡಲದ ನಾಗಂಪೇಟೆ ಗ್ರಾಮದ ಶೇಷಾಲ ನರೇಶ್ ಹಾಗೂ ನಿಜಾಮಾಬಾದ್ ಕೋಟಗಲ್ಲಿಗೆ ಸೇರಿದ ಮೇಘನಾ 2014ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರರಿದ್ದಾರೆ. ನರೇಶ್ ಅವರ ತಂದೆ ಮೃತಪಟ್ಟ ಬಳಿಕ ಅನುಕಂಪದ ಆಧಾರದ ಮೇಲೆ ವಿದ್ಯುತ್ ಇಲಾಖೆಯಲ್ಲಿ ಉದ್ಯೋಗ ಪಡೆದಿದ್ದರು. ಇತ್ತೀಚೆಗೆ ಜೂನಿಯರ್ ಅಸಿಸ್ಟೆಂಟ್

ಸಾಲದ‌ ಒತ್ತಡಕ್ಕೆ ದಂಪತಿ ಆತ್ಮಹತ್ಯೆ| ಅನಾಥವಾದ ಇಬ್ಬರು ಮಕ್ಕಳು Read More »

ಡಿಕೆಶಿ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ

ಸಮಗ್ರ ನ್ಯೂಸ್: ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ 2 ತಿಂಗಳ ಬಳಿಕ ಸಂಪುಟ ವಿಸ್ತರಣೆ ಆಗಿದ್ದು, ಇದೀಗ ಡಿಕೆ ಶಿವಕುಮಾರ್ ಸಂಪುಟದಲ್ಲಿ 33 ಸಚಿವರಿದ್ದಾರೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಯಾರ್ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ… ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್​ ಆಗಿದ್ದು, ಪಟ್ಟಿ ಸಿಎಂ ಇಲಾಖೆ ತಲುಪಿದೆ. ಯಾವ ಸಚಿವರಿಗೆ ಯಾವ ಖಾತೆ?ಎನ್​.ಚಲುವರಾಯಸ್ವಾಮಿ-ಕೃಷಿ ಇಲಾಖೆರಿಜ್ವಾನ್ ಅರ್ಷದ್-ಆಹಾರ & ನಾಗರಿಕ ಸರಬರಾಜು ವ್ಯವಹಾರಕೆ.ಹೆಚ್​.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ ಸಂತೋಷ್ ಲಾಡ್-ಕಾರ್ಮಿಕ ಇಲಾಖೆಕೆ.ಎಸ್.ಬಸವಂತಪ್ಪ- ಮೀನುಗಾರಿಕೆ,

ಡಿಕೆಶಿ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ Read More »

ರಾಜ್ಯಾದ್ಯಂತ 1 ವರ್ಷದವರೆಗೆ ಗುಟ್ಕಾ, ಪಾನ್ ಮಸಾಲಾ ಮಾರಾಟ ಬ್ಯಾನ್

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟದ ಮೇಲೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(a) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ ನಿಯಮಾವಳಿಗಳು-2011 ರ ನಿಯಮ 2.3.4 ರ

ರಾಜ್ಯಾದ್ಯಂತ 1 ವರ್ಷದವರೆಗೆ ಗುಟ್ಕಾ, ಪಾನ್ ಮಸಾಲಾ ಮಾರಾಟ ಬ್ಯಾನ್ Read More »

ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಿಸಿಲು- ಮಳೆಯ ಆಟದ ಮಧ್ಯೆ ರಾಜ್ಯದಲ್ಲಿ ಮತ್ತೊಮ್ಮೆ ವರುಣದೇವನ ಆರ್ಭಟ ಜೋರಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಅಪ್ಡೇಟ್ ಪ್ರಕಾರ, ಆಗಸ್ಟ್ 13 ಹಾಗೂ 14 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14 ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು

ರಾಜ್ಯಾದ್ಯಂತ ಮುಂದಿನ ಎರಡು ದಿನ ಭಾರೀ ಮಳೆ ಮುನ್ಸೂಚನೆ Read More »

ಕಡಬ: ಫಾಲ್ಸ್ ವೀಕ್ಷಣೆಗೆ ಬಂದಿದ್ದ ವಿದ್ಯಾರ್ಥಿಗಳ‌ ಮೇಲೆ ಅನೈತಿಕ ಪೊಲೀಸ್ ಗಿರಿ| ಐವರ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂಡಡ್ಕ ಜಲಪಾತಕ್ಕೆ ಬಂದಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪ್ರಾಪ್ತ ವಯಸ್ಕ ಬಾಲಕ, ತನ್ನ ನಾಲ್ವರು ಸಹಪಾಠಿಗಳೊಂದಿಗೆ ಕಡಬದ ಕುಂಡಡ್ಕ ಫಾಲ್ಸ್ ಗೆ ತೆರಳಿ ಆಟವಾಡುತ್ತಿದ್ದಾಗ, ಅಲ್ಲಿಗೆ ಬಂದ ಆರೋಪಿಗಳಾದ ರೋಹಿತ್, ದೇವಿಪ್ರಸಾದ್‌, ಚಂದನ್‌, ಉಮೇಶ ಹಾಗೂ ವಿದ್ಯಾರ್ಥಿಗಳೊಂದಿಗೆ ಇದ್ದ ವಿದ್ಯಾರ್ಥಿನಿಯ ತಂದೆ ಸ್ಥಳಕ್ಕೆ ಬಂದಿದ್ದು, ಆರೋಪಿಗಳು ಜೊತೆ

ಕಡಬ: ಫಾಲ್ಸ್ ವೀಕ್ಷಣೆಗೆ ಬಂದಿದ್ದ ವಿದ್ಯಾರ್ಥಿಗಳ‌ ಮೇಲೆ ಅನೈತಿಕ ಪೊಲೀಸ್ ಗಿರಿ| ಐವರ ವಿರುದ್ಧ ದೂರು ದಾಖಲು Read More »

ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ| ಕಾರಿಂಜೇಶ್ವರ, ನರಹರಿ ಪರ್ವತದಲ್ಲಿ ಪುಣ್ಯಸ್ನಾನ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ ಜೋರಾಗಿದ್ದು ದ.ಕ‌ ಜಿಲ್ಲೆಯ ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನ ಮತ್ತು ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಆ.12ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ನಡೆಯಲಿದೆ. ಕಾರಿಂಜ ಕ್ಷೇತ್ರದಲ್ಲಿ ಗದಾತೀರ್ಥ ಕೆರೆ ಸಹಿತ ಜಾನು ತೀರ್ಥ ಮತ್ತು ಉಂಗುಷ್ಠ ತೀರ್ಥ ಕುಂಡದಲ್ಲಿ ತೀರ್ಥ ಸ್ನಾನ ಹಾಗೂ ಪಾರ್ವತಿ ಪರಮೇಶ್ವರ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್

ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ| ಕಾರಿಂಜೇಶ್ವರ, ನರಹರಿ ಪರ್ವತದಲ್ಲಿ ಪುಣ್ಯಸ್ನಾನ Read More »

ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ| ಹಾಲೆಮರದ ಕಷಾಯದ ವಿಷಯ ನಿಮ್ಗೊತ್ತಾ?

ಸಮಗ್ರ ನ್ಯೂಸ್: ಆಟಿ ಅಮಾವಾಸ್ಯೆಯು ಕರಾವಳಿ ಕರ್ನಾಟಕದ (ತುಳುನಾಡಿನ) ಅತ್ಯಂತ ವಿಶಿಷ್ಟ ಹಾಗೂ ಸಾಂಸ್ಕೃತಿಕ ಪ್ರಾಮುಖ್ಯತೆ ಹೊಂದಿರುವ ಆಚರಣೆ. ಈ ದಿನದಂದು ತುಳುನಾಡಿನ ಪ್ರತಿಯೊಂದು ಮನೆಯಲ್ಲೂ ಹಾಲೆ ಮರದ (ಪಾಲೆ ಮರ / ಹಾಲಿಕೆತ್ತಿ) ಕಷಾಯವನ್ನು ಕುಡಿಯುವ ಪದ್ಧತಿ ಶತಮಾನಗಳಿಂದಲೂ ನಡೆದುಕೊಂಡು ಬಂದಿದೆ. ಆಟಿ ಅಮಾವಾಸ್ಯೆಯ ಹಿನ್ನೆಲೆ, ಹಾಲಿಕೆತ್ತಿ ಕಷಾಯದ ಮಹತ್ವ ಹಾಗೂ ಅದನ್ನು ತಯಾರಿಸುವ ವಿಧಾನದ ವಿವರ ಇಲ್ಲಿದೆ. ಆಟಿ (ಆಷಾಢ) ತಿಂಗಳಲ್ಲಿ ಕರಾವಳಿಯಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತದೆ. ಇದರಿಂದಾಗಿ ಶರೀರದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿ

ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ| ಹಾಲೆಮರದ ಕಷಾಯದ ವಿಷಯ ನಿಮ್ಗೊತ್ತಾ? Read More »