August 2026

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾದ ಫೋಕ್ಸೋ ಆರೋಪಿ; ತೀವ್ರ ಶೋಧ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ವಿಚಾರಣಾಧೀನ ಬಂಧನದಲ್ಲಿದ್ದ ಆರೋಪಿಯೊಬ್ಬ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ದೂರಿನ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಲಾಗಿದೆ. ಪರಾರಿಯಾದ ಆರೋಪಿಯನ್ನು ರೋಶನ್ ಫರ್ನಾಂಡಿಸ್ (36) ಎಂದು ಗುರುತಿಸಲಾಗಿದೆ. ಈತ ಮೂಡುಬಿದಿರೆ ತಾಲೂಕಿನ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಬಂಧನದ ಬಳಿಕ […]

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾದ ಫೋಕ್ಸೋ ಆರೋಪಿ; ತೀವ್ರ ಶೋಧ Read More »

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ| ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತದ ಪರಿಚಲನೆ ಸಕ್ರಿಯಗೊಂಡಿದ್ದು, ದೇಶದ ಹಲವು ರಾಜ್ಯಗಳ ಜೊತೆಗೆ ಕರ್ನಾಟಕದಲ್ಲೂ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮಾನ್ಸೂನ್ ಟ್ರಫ್ ಸಕ್ರಿಯವಾಗಿರುವುದರಿಂದ ಮಧ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ಮಳೆಯ ಪ್ರಮಾಣ ತೀವ್ರಗೊಳ್ಳಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಹವಾಮಾನ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ| ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು| ಧರ್ಮಸ್ಥಳ ಯಾತ್ರೆಗೆ ಹೊರಟವರು ಮಸಣಕ್ಕೆ

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ತಮಕೂರು ಜಿಲ್ಲೆಯ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಬ್ಬಿ ತಾಲ್ಲೂಕಿನ ಹಳಿಲ್ ಗದ್ದೆ ನಿವಾಸಿಗಳಾದ ಜ್ಞಾನೇಶ್(28), ಮೋಹನ್(30) ಮತ್ತು ಗುರುಕಿರಣ್(28) ಮೃತಪಟ್ಟವರು. ಪ್ರೇಮಕುಮಾರ್ ಮತ್ತು ಹೃತಿಕ್ ಗಾಯಗೊಂಡಿದ್ದಾರೆ. ಒಂದೇ ಊರಿನ ಯುವಕರು ಧರ್ಮಸ್ಥಳಕ್ಕೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹೊರಟಿದ್ದರು. ಬೆಳಗಿನ ಜಾವ ಕೊಟ್ಟಿಗೆಹಾರ ಬಳಿ ಬಂದಾಗ ಚಾಲಕ ನಿದ್ರೆಯಲ್ಲಿ ಇದ್ದಿದ್ದರಿಂದ ಎಡಭಾಗದ

ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು| ಧರ್ಮಸ್ಥಳ ಯಾತ್ರೆಗೆ ಹೊರಟವರು ಮಸಣಕ್ಕೆ Read More »

ಭಾರೀ ಮಳೆ ಹಿನ್ನೆಲೆ| ಆ.08 ರಂದು ಪುತ್ತೂರು ವಿಭಾಗದ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಆ.08) ರಂದು ಜಿಲ್ಲೆಯ ಪುತ್ತೂರು ವಿಭಾಗದ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ

ಭಾರೀ ಮಳೆ ಹಿನ್ನೆಲೆ| ಆ.08 ರಂದು ಪುತ್ತೂರು ವಿಭಾಗದ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ಉಮರ್ ಫಾರೂಕ್‌ನನ್ನು ಬಂಧಿಸಿದೆ. ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎನ್‌ಐಎ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಮಹತ್ವದ ಯಶಸ್ಸು ದೊರೆತಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದು, ಎನ್‌ಐಎ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಉಮರ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಮತ್ತೊಬ್ಬ ಆರೋಪಿ ಅರೆಸ್ಟ್ Read More »

ಮೂಡಬಿದ್ರೆ: ಆ.7ರಂದು ಆಳ್ವಾಸ್ ನಲ್ಲಿ ದೇಶದ ಅತೀದೊಡ್ಡ ಉದ್ಯೊಗ ಮೇಳ

ಸಮಗ್ರ ನ್ಯೂಸ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7ರಂದು ಬೆಳಿಗ್ಗೆ 9.30ಕ್ಕೆ ವಿದ್ಯಾಗಿರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್‌ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಸದ ಸದಸ್ಯ ಬ್ರಿಜೇಶ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ

ಮೂಡಬಿದ್ರೆ: ಆ.7ರಂದು ಆಳ್ವಾಸ್ ನಲ್ಲಿ ದೇಶದ ಅತೀದೊಡ್ಡ ಉದ್ಯೊಗ ಮೇಳ Read More »

ಮಂಗಳೂರು: ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್| ಐವರ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಪಾಂಡೇಶ್ವರದ ಖಾಸಗಿ ಮೆಡಿಕಲ್ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ನಡೆಸಿದ ಆರೋಪದ ಮೇರಿಗೆ ಐವರು ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದೆ. ಖಾಸಗಿ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಕಪ್ಪು ಬಣ್ಣದ ಶೂ ಧರಿಸಿದ್ದರು ಎನ್ನುವ ಕಾರಣಕ್ಕೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದೆ. ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ದೂರು ನೀಡಿದ್ದಾರೆ. ಗುಜ್ಜರಕೆರೆ ಪ್ರದೇಶದಲ್ಲಿ ಘಟನೆ ನಡೆದಿದೆ.

ಮಂಗಳೂರು: ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್| ಐವರ ವಿರುದ್ಧ ಪ್ರಕರಣ ದಾಖಲು Read More »

ಮುಂದುವರಿದ ವರ್ಷಧಾರೆ| ಏಳು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ

ಮುಂದುವರಿದ ವರ್ಷಧಾರೆ| ಏಳು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರು Read More »

ರಿಯಾಜ್ ಫರಂಗಿಪೇಟೆಗೆ ‘ತಾಂಟಿದ’ ಕೋರ್ಟ್| ಪ್ರಚೋದನಕಾರಿ ಭಾಷಣಕ್ಕೆ 6 ತಿಂಗಳು ಜೈಲು ಮತ್ತು ದಂಡ

ಸಮಗ್ರ ನ್ಯೂಸ್: ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ

ರಿಯಾಜ್ ಫರಂಗಿಪೇಟೆಗೆ ‘ತಾಂಟಿದ’ ಕೋರ್ಟ್| ಪ್ರಚೋದನಕಾರಿ ಭಾಷಣಕ್ಕೆ 6 ತಿಂಗಳು ಜೈಲು ಮತ್ತು ದಂಡ Read More »

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಚ್ಚ ಹೊಸ‌ ಯೋಜನೆ ಆರಂಭ| ‘ಋತುಧಾರೆ’ಗೆ ರಮ್ಯಾ ರಾಯಭಾರಿ

ಸಮಗ್ರ ನ್ಯೂಸ್: ಮಹಿಳೆಯರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿ ಮಾಡಿದೆ. ಪ್ರಮುಖವಾಗಿ ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯಿಂದ ‘ಋತುತಾರೆ’ ಎಂದು ಮಹತ್ವದ ಯೋಜನೆ ಜಾರಿಯಾಗಿದೆ. ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ನಟಿ ರಮ್ಯಾ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು. ಮಹಿಳೆಯರಿಗಾಗಿ ಋತುತಾರೆ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಯು.ಟಿ.ಖಾದರ್

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಚ್ಚ ಹೊಸ‌ ಯೋಜನೆ ಆರಂಭ| ‘ಋತುಧಾರೆ’ಗೆ ರಮ್ಯಾ ರಾಯಭಾರಿ Read More »