ಸಮಗ್ರ ನ್ಯೂಸ್: ಮನೆ ಅಂಗಳದಲ್ಲಿ ಯಂತ್ರದ ಮೂಲಕ ವಾಹನ ತೊಳೆಯುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ಸಮೀಪದ ಬಡಾವು ಎಂಬಲ್ಲಿ ಶುಕ್ರವಾರ ನಡೆದಿದ್ದು, ವಿದ್ಯುತ್ ಆಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಬಡಾವು ನಿವಾಸಿ ಈಶ್ವರ ನಾಯ್ಕ ಅವರ ಪುತ್ರ, ಪುತ್ತೂರು ನಗರದ ಮೆಡಿಕಲ್ ಸೆಂಟರ್ನಲ್ಲಿ ಉದ್ಯೋಗಿಯಾದ್ದ ರಕ್ಷಿತ್ (29) ಮೃತಪಟ್ಟವರು. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










