ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಎನ್.ಕೆ ಶಾಫಿ ಸ ಅದಿ ಆಯ್ಕೆ

Ad Widget ... ..

ಬೆಂಗಳೂರು, ನ.17: ರಾಜ್ಯ ವಕ್ಫ್ ಬೋರ್ಡ್‍ನ ನೂತನ ಅಧ್ಯಕ್ಷರಾಗಿ ಮೌಲಾನ ಎನ್.ಕೆ.ಎಂ.ಶಾಫಿ ಸಅದಿ ಆಯ್ಕೆಯಾಗಿದ್ದಾರೆ. ಬುಧವಾರ ನಗರದ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಫಿ ಸಅದಿ ಪರ 6 ಮತ ಹಾಗೂ ಅವರ ಪ್ರತಿಸ್ಪರ್ಧಿ ಆಸಿಫ್ 4 ಮತಗಳನ್ನು ಪಡೆದರು.

Ad Widget

ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೌಲಾನ ಎನ್.ಕೆ.ಎಂ.ಶಾಫಿ ಸಅದಿ, 2011ರಲ್ಲಿ ನಾನು ವಕ್ಫ್ ಬೋರ್ಡ್‍ಗೆ ಸದಸ್ಯನಾಗಿ ಬಂದಿದ್ದೆ. ಅಲ್ಲಿಂದ ಈವರೆಗೆ ಸಮುದಾಯದ ಸಾಕಷ್ಟು ಸಮಸ್ಯೆಗಳನ್ನು ಗಮನಿಸಿದ್ದೇನೆ. ವಕ್ಫ್ ಬೋರ್ಡ್ ಮೂಲಕ ಮುಸ್ಲಿಮ್ ಸಮುದಾಯದ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಬಹುದು. ಅಲ್ಲದೆ, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಾಗುತ್ತದೆ ಎಂದರು.

ಮುಸ್ಲಿಮ್ ಸಮುದಾಯದ ಪ್ರಾಥಮಿಕ ಶಿಕ್ಷಣದ ಪ್ರಮಾಣ ಶೇ.54ರಷ್ಟಿದ್ದರೆ, ಉನ್ನತ ಶಿಕ್ಷಣದ ಪ್ರಮಾಣ ಕೇವಲ ಶೇ.6ರಷ್ಟಿದೆ. ಸರಕಾರಿ ಉದ್ಯೋಗಗಳಲ್ಲಿ ಶೇ.4ರಷ್ಟು ಮಾತ್ರ ಪ್ರಾತಿನಿಧ್ಯ ಇದೆ. ಇದನ್ನು ಶೇ.15ರಷ್ಟು ಮಾಡಬೇಕಾದ ಅಗತ್ಯವಿದೆ. ಸಮುದಾಯದ ಸಮಸ್ಯೆಗಳಿಗೆ ಸಂಬಂಧಿಸಿದ ಮಾಹಿತಿ ನಮ್ಮ ಬಳಿಯಿದೆ. ಅದರ ಆಧಾರದಲ್ಲಿ ನಾವು ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ಬಹುಕೋಟಿ ಮೌಲ್ಯದ ವಕ್ಫ್ ಆಸ್ತಿಗಳಿವೆ. ಆದರೆ, ಅವುಗಳನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಬೇಕಿದೆ. ರಾಜ್ಯದಲ್ಲಿ 90 ಲಕ್ಷ ಮುಸ್ಲಿಮರಿದ್ದಾರೆ. ಖಾಲಿಯಿರುವ ವಕ್ಫ್ ಆಸ್ತಿಗಳಲ್ಲಿ ಶಾಲೆ, ಕಾಲೇಜುಗಳನ್ನು ಆರಂಭಿಸಬಹುದು. ಶಿಕ್ಷಣ ಕ್ಷೇತ್ರದಲ್ಲಿ ಗಮನ ಹರಿಸಿದರೆ ಮುಸ್ಲಿಮ್ ಸಮುದಾಯದ ಶೇ.50ರಷ್ಟು ಸಮಸ್ಯೆಗಳನ್ನು ಬಗೆಹರಿಸಿದಂತಾಗುತ್ತದೆ ಎಂದು ಶಾಫಿ ಸಅದಿ ತಿಳಿಸಿದರು.

Leave a Comment

Your email address will not be published. Required fields are marked *