ಉಪ್ಪಿನಂಗಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಮತ್ತು ಸದಸ್ಯನಿಂದ ಹಲ್ಲೆ

Ad Widget ... ..

ನೆಲ್ಯಾಡಿ : ಉಪ್ಪಿನಂಗಡಿ ಬಳಿ ವಿದ್ಯುತ್ ಸಂಪರ್ಕ ತನಿಖೆ ನಡೆಸಲು ತೆರಳಿದ ಸಂದರ್ಭದಲ್ಲಿ ಕರ್ತವ್ಯ ನಿರತ ಮೆಸ್ಕಾಂ ಜೆಇಇ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget

ನೆಲ್ಯಾಡಿ ಮೆಸ್ಕಾಂ ಶಾಖಾ ಇಂಜಿನಿಯರ್ ರಮೇಶ್.ಬಿ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಕಾರ್ತಿಕೇಯನ್ ಹಾಗೂ ಎಂ.ಕೆ ಪೌಲೋಸ್ ಹಲ್ಲೆ ನಡೆಸಿದವರು ಎನ್ನಲಾಗಿದೆ. ಗುಂಡ್ಯ ಎಂಬಲ್ಲಿ ವಿದ್ಯುತ್ ಸಂಪರ್ಕ ಪರಿಶೀಲನೆ ವೇಳೆ ಈ ಘಟನೆ ನಡೆದಿದೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸಿ ಕಾರ್ತಿಕೇಯನ್ ಹಾಗೂ ಎಂ.ಕೆ ಪೌಲೋಸ್ ಇಬ್ಬರನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.

Leave a Comment

Your email address will not be published. Required fields are marked *