ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿ.15ರವರೆಗೆ ಮಳೆ ಸುರಿಯಲಿದೆ.
ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.







