ಜಮ್ಮು ಕಾಶ್ಮೀರಾ: 2022 ರ ಮೊದಲ ದಿನವೇ ಸಂಭವಿಸಿದ ಭೀಕರ ದುರಂತಕ್ಕೆ 6ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ವೈಶ್ಣೋದೇವಿ ಮಂದಿರದಲ್ಲಿ ನಡೆದಿದೆ.
ಇಂದು ಮುಂಜಾನೆ ಘಟನೆ ನಡೆದಿದ್ದು, ದೇವಿ ದರ್ಶನಕ್ಕಾಗಿ ಕಿಕ್ಕಿರಿದು ಸೇರಿದ್ದ ಜನರ ನಡುವೆ ಉಂಟಾದ ಗೊಂದಲದಿಂದ ದುರಂತ ನಡೆದಿದೆ. ಸದ್ಯ ಆರು ಜನರು ಮೃತಪಟ್ಟಿದ್ದಾರೆ. ಗಾಯಗೊಂಡ ಹಲವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಇದೆ ಎಂದು ತಿಳಿದುಬಂದಿದೆ.






