ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ನ್ಯಾಯಾದೀಶೆ| ಕಾರನ್ನುಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪು

Ad Widget ... ..

ದೊಡ್ಡಬಳ್ಳಾಪುರ: ನ್ಯಾಯಾಧೀಶೆಯೊಬ್ಬರು ರಾತ್ರಿ ವೇಳೆ ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪೊಂದು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡ ವಿಡಿಯೊ ವೈರಲ್‌ ಆಗಿದೆ.

Ad Widget

ನಗರದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನ್ಯಾಯಾಧೀಶೆ ಮತ್ತು ವಕೀಲರೊಬ್ಬರ ಜೊತೆ ವಕೀಲರ ಗುಂಪು ನಡೆಸಿದ ಜಟಾಪಟಿ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ.
ಈ ವಿಡಿಯೊ ತುಣುಕು ಈಗ ಎಲ್ಲೆಡೆ ಹರಿದಾಡುತ್ತಿದೆ. ಕಾರಿನಲ್ಲಿ ಕುಳಿತಿದ್ದ ವಕೀಲನನ್ನು ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಗುಂಪು ನಂತರ ಕಾರು ಚಾಲನೆ ಮಾಡುತ್ತಿದ್ದ ನ್ಯಾಯಾಧೀಶೆಯನ್ನೂ ಕೆಳಗೆ ಇಳಿಯುವಂತೆ ‌ಒತ್ತಾಯಿಸಿರುವುದು ವಿಡಿಯೊದಲ್ಲಿದೆ.

ಈ ಘಟನೆ ನಡೆದು ಎರಡು ದಿನಗಳಾದರೂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ಎಲ್ಲರೂ ಹಿಂಜರಿಯುತ್ತಿದ್ದಾರೆ. ಇದರ ಬೆನ್ನಲ್ಲೇ ದೊಡ್ಡಬಳ್ಳಾಪುರದ ಜೆಎಂಎಫ್‌ಸಿ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಜ್ಯೋತಿ ಕಾಳೆ ಅವರನ್ನು ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

Leave a Comment

Your email address will not be published. Required fields are marked *