ಉಡುಪಿ: ಅನಾಥಾಶ್ರಮದಲ್ಲಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ 

ಉಡುಪಿ: ಹಿರಿಯಡ್ಕದ ‘ಅಪ್ಪ-ಅಮ್ಮ’ ಅನಾಥಾಶ್ರಮದಲ್ಲಿ ಆಶ್ರಯ ಪಡೆದುಕೊಂಡಿದ್ದ  ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Ad Widget ... ..

ಕೋಡಿಬೆಟ್ಟು ನಿವಾಸಿ ದಾಕ್ಷಾಯಿಣಿ(47) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವಿವಾಹಿತೆಯಾಗಿದ್ದು ಇವರು ಅನಾಥಾಶ್ರಮದ ಬಳಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

ಮಾನಸಿಕವಾಗಿ ನೊಂದುಕೊಂಡಿದ್ದು  ಸೂಕ್ತ ಚಿಕಿತ್ಸೆ ಇಲ್ಲದೆ, ಮಾನಸಿಕವಾಗಿ ಅಸ್ವಸ್ಥಗೊಂಡಿದ್ದರು. ಕಳೆದ ಐದು ತಿಂಗಳಿನಿಂದ ವರಂಬಳ್ಳಿ ಬಳಿಯ ‘ಅಪ್ಪ-ಅಮ್ಮ’ ಅನಾಥಾಶ್ರಮದಲ್ಲಿ ಆಕೆಗೆ ಆಶ್ರಯ ನೀಡಲಾಗಿತ್ತು. ಆದರೆ, ಮೇ. 16 ರಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *