ಇಂದು ಮತ್ತು ನಾಳೆ ಭಾರತ್ ಬಂದ್| ಮುಷ್ಕರಕ್ಕೆ ಕರೆನೀಡಿದ ಕಾರ್ಮಿಕ‌ ಸಂಘಟನೆಗಳು; ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಸೋಮವಾರ ಬೆಳಗ್ಗೆ 6ರಿಂದ ಬುಧವಾರ ಬೆಳಗ್ಗೆ 6ರವರೆಗೆ ದೇಶಾದ್ಯಂತ ‘ಭಾರತ್‌ ಬಂದ್‌’ ಹೆಸರಿನಲ್ಲಿ ಮುಷ್ಕರಕ್ಕೆ ಕರೆ ನೀಡಿವೆ. ಬ್ಯಾಂಕಿಂಗ್‌, ವಿಮೆ, ರಸ್ತೆ ಸಾರಿಗೆ, ವಿದ್ಯುಚ್ಛಕ್ತಿ, ಕಲ್ಲಿದ್ದಲು, ತೈಲ, ದೂರಸಂಪರ್ಕ, ಆದಾಯ ತೆರಿಗೆ ಸೇರಿ ವಿವಿಧ ವಲಯದ ಕಾರ್ಮಿಕರು ಈ ಮುಷ್ಕರಕ್ಕೆ ಬೆಂಬಲ ಘೋಷಣೆ ಮಾಡಿರುವುದರಿಂದ ಹಲವು ಸೇವೆಗಳಲ್ಲಿ ವ್ಯತ್ಯಯವಾಗುವ ನಿರೀಕ್ಷೆ ಇದೆ.

Ad Widget ... ..

ಕೇಂದ್ರ ಸರ್ಕಾರದ ನೀತಿಗಳಿಂದ ಕಾರ್ಮಿಕರು, ರೈತರು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಕಾರ್ಮಿಕ, ರೈತ, ಜನ ಹಾಗೂ ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಮುಷ್ಕರಕ್ಕೆ ಕರೆ ನೀಡಿದ್ದೇವೆ ಎಂದು ಕಾರ್ಮಿಕ ಸಂಘಟನೆಗಳ ನಾಯಕರು ತಿಳಿಸಿದ್ದಾರೆ. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು, ಯಾವುದೇ ಸಂಸ್ಥೆಯನ್ನು ಖಾಸಗೀಕರಣ ಮಾಡಬಾರದು, ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆ ಕೈಬಿಡಬೇಕು, ಉದ್ಯೋಗ ಖಾತ್ರಿ ವೇತನ ಹೆಚ್ಚಿಸಬೇಕು, ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮಂಡಿಸಿವೆ.

Ad Widget

Leave a Comment

Your email address will not be published. Required fields are marked *