ಪ್ರಾಣಿವಧೆಗೆ ಸ್ಟನ್ನಿಂಗ್ ಕಡ್ಡಾಯವಲ್ಲ- ಸಚಿವ ಪ್ರಭು ಚವ್ಹಾಣ್

Ad Widget ... ..

ಸಮಗ್ರ ನ್ಯೂಸ್: ಹಲಾಲ್‌ ಬಾಯ್ಕಾಟ್‌ ಅಭಿಯಾನ ಬೆನ್ನೆಲ್ಲೇ ಪ್ರಾಣಿಗಳ ವಧೆ ಸಂದರ್ಭದಲ್ಲಿ ‘ಸ್ಟನ್ನಿಂಗ್‌’ (ಪ್ರಜ್ಞೆ ತಪ್ಪಿಸುವ) ವಿಧಾನ ಪಾಲಿಸಬೇಕು ಎಂಬ ಪಶುಪಾಲನಾ ಇಲಾಖೆ ಆದೇಶ ಪ್ರತಿಯೊಂದು ವೈರಲ್‌ ಆಗಿತ್ತು. ಆದರೆ, ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಇಲಾಖೆ ಅದೇಶದಿಂದ ಹಿಂದೆ ಸರಿದಿದ್ದು, ಸ್ಟನ್ನಿಂಗ್‌ ಕಡ್ಡಾಯ ನಿಯಮ ಆದೇಶ ಜಾರಿಗೊಳಿಸಿಲ್ಲ ಎಂದು ಸಚಿವ ಪ್ರಭು ಚವ್ಹಾಣ್‌ ಸ್ಟಷ್ಟನೆ ನೀಡಿದ್ದಾರೆ.

Ad Widget

‘ಆಹಾರಕ್ಕಾಗಿ ಪ್ರಾಣಿ ವಧೆ ಮಾಡುವಾಗ ಪ್ರಾಣಿಗಳಿಗೆ ಹಿಂಸೆ ನೀಡಬಾರದು. ಕಡ್ಡಾಯವಾಗಿ ಸ್ಟನ್ನಿಂಗ್‌ ಬಳಸಬೇಕು. ಆದರೆ, ಬೆಂಗಳೂರು ಪ್ರಾಣಿವಧಾಗಾರಗಳಲ್ಲಿ ಈ ನಿಯಮ ಪಾಲಿಸುತ್ತಿಲ್ಲ. ಈ ಕುರಿತು ಕ್ರಮವಹಿಸಬೇಕು’ ಎಂದು ಬಿಬಿಎಂಪಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಉಮಾಪತಿ ಶುಕ್ರವಾರ (ಏ.1)ಆದೇಶ ಹೊರಡಿಸಿದ್ದರು. ಶನಿವಾರ ಆದೇಶ ಪ್ರತಿ ವೈರಲ್‌ ಆಗಿತ್ತು. ಬಳಿಕ ಈ ಕುರಿತು ಸಚಿವ ಪ್ರಭು ಚವ್ಹಾಣ್‌ ಮಾತನಾಡಿ, ‘ಸ್ಟನ್ನಿಂಗ್‌ ಕಡ್ಡಾಯ ನಿಯಮ ಆದೇಶವನ್ನು ನಾವು ಹೊರಡಿಸಿಲ್ಲ. ಪತ್ರದ ಬಗ್ಗೆ ನಾನು ಪರಿಶೀಲನೆ ಮಾಡುತ್ತೇನೆ’ ಎಂದು ತಿಳಿಸಿದರು

Leave a Comment

Your email address will not be published. Required fields are marked *