ಕರ್ನಾಟಕದಾದ್ಯಂತ ನಾಳೆಯಿಂದಲೇ ಮದ್ಯ ಮಾರಾಟಗಾರರ ಮುಷ್ಕರ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ನಾಳೆಯಿಂದ ಮೇ 19 ರವರೆಗೆ ಮದ್ಯ ಮಾರಾಟಗಾರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಕುರಿತು ಉಡುಪಿಯಲ್ಲಿ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಮಾಹಿತಿ‌ ನೀಡಿದ್ದು, ಪ್ರತಿಭಟನೆ ಘೋಷಿಸಿದ್ದಾರೆ.

Ad Widget ... ..

ಕೆಎಸ್ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಒಂದು ದಿನ ಮದ್ಯ ಖರೀದಿ ಮಾಡದಿದ್ದರೆ ರಾಜ್ಯದಲ್ಲಿ 70 ಕೋಟಿ ರೂಪಾಯಿ ನಷ್ಟವಾಗುತ್ತದೆ. ಈ ಕಾರಣದಿಂದಾಗಿ ವಿಭಾಗಮಟ್ಟದಲ್ಲಿ ಮದ್ಯ ಖರೀದಿ ನಿಲ್ಲಿಸಲು ನಿರ್ಧಾರವನ್ನು ಮಾಡಲಾಗಿದೆ. ಇದರ ಜೊತೆಗೆ ಕಲಬುರಗಿ ವಿಭಾಗದಲ್ಲಿಯೂ ಮದ್ಯ ವ್ಯಾಪಾರಿಗಳಿಂದ ಮುಷ್ಕರ ನಡೆಸಲಾಗಿದೆ. ಜೊತೆಗೆ ಹೊಸಪೇಟೆ, ಬೆಳಗಾವಿ, ಮೈಸೂರು, ಮಂಗಳೂರು ವಿಭಾಗದಲ್ಲಿಯೂ ಮದ್ಯ ಮಾರಾಟ ಇರುವುದಿಲ್ಲ.

Ad Widget

ಮೇ 6 ರಿಂದ ಗುಲ್ಬರ್ಗ ವಿಭಾಗದ ಜಿಲ್ಲೆಗಳಲ್ಲಿಯೂ ಅಂದರೆ ಬೀದರ್, ರಾಯಚೂರು, ಯಾದಗಿರಿಯಲ್ಲೂ ಮುಷ್ಕರ ನಡೆಯಲಿದೆ. ಮೇ 10 ರಂದು ಹೊಸಪೇಟೆ ವಿಭಾಗದ ಜಿಲ್ಲೆಗಳಲ್ಲಿಯೂ ಮುಷ್ಕರ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *