ಜೈಲಿನಿಂದ ಬಿಡುಗಡೆಯಾದವನ ರುಂಡ ಚೆಂಡಾಡಿದ ಹಂತಕರು. ಏನಿದು ಭೀಬತ್ಸ ಕೃತ್ಯ? ಮುಂದೆ ಓದಿ..

ಹಾಸನ.ಮೇ23: ಎರಡು ವಾರದ ಹಿಂದಷ್ಟೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಒಬ್ಬನ ತಲೆಯನ್ನು ಹಾಡುಹಗಲೇ ಮಚ್ಚಿನಿಂದ ಕೊಚ್ಚಿ, ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯ ನಿವಾಸಿ ಭರತ್ ಎಂಬುವನೇ ಕೊಲೆಯಾದ ಯುವಕ.

Ad Widget ... ..

ಇಂದು ಹಾಸನ ಸಂತೆಪೇಟೆಯ 80 ಫೀಟ್ ರಸ್ತೆಯಲ್ಲಿ ಭರತ್​​ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ಭೀಕರ ಘಟನೆ ನಡೆದಿದೆ. ಮಚ್ಚಿನಿಂದ ಕೊಚ್ಚಿರುವ ಹಂತಕರು ತಲೆಯನ್ನು ಎರಡು ಹೋಳು ಮಾಡಿದ್ದಾರೆ ಎನ್ನಲಾಗಿದೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಪೂರ್ವದ್ವೇಷದಿಂದಲೇ‌ ಈ ಕೃತ್ಯ ನಡೆದಿರುವ ಅನುಮಾನವಿದ್ದು, ಪೊಲೀಸರು ಹಂತಕರ ಬೆನ್ನು ಬಿದ್ದಿದ್ದಾರೆ. ಒಟ್ಟಾರೆ ಜೈಲಲ್ಲಿ ಮುದ್ದೆಮುರಿದು ಬಂದಿದ್ದಾತ ಹಾಡುಹಗಲೇ‌ ಕೊಲೆಯಾಗಿದ್ದು, ಹಾಸನ ಬೆಚ್ಚಿ ಬಿದ್ದಿದೆ.

Ad Widget

Leave a Comment

Your email address will not be published. Required fields are marked *