ದ.ಕ ಜಿಲ್ಲೆಯಲ್ಲಿ‌ ನಿರ್ಬಂಧಗಳಿಗೆ ಮುಕ್ತಿ; ಆ.14ರವರೆಗೆ 144 ಸೆಕ್ಷನ್ ಮುಂದುವರಿಕೆ – ಜಿಲ್ಲಾಧಿಕಾರಿ ಆದೇಶ

ಸಮಗ್ರ‌ ನ್ಯೂಸ್: ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಹೇರಲಾಗಿದ್ದ ಕೆಲವೊಂದು ನಿರ್ಬಂಧಗಳನ್ನು ‌ಸಡಿಲಿಸಿ ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Ad Widget ... ..

ಜಿಲ್ಲೆಯಲ್ಲಿ‌ ಇದುವರೆಗೆ ರಾತ್ರಿ 9 ಗಂಟೆಗೆ ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಆ.8ರಿಂದ ರಾತ್ರಿ 9 ಗಂಟೆಯ ನಂತರವು ಅಂಗಡಿಗಳನ್ನು ಓಪನ್ ಇಡಬಹುದು. ಬಾರ್, ವೈನ್ ಶಾಪ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೂ ಕೂಡ ಯಾವುದೇ ನಿರ್ಬಂಧವಿರುವುದಿಲ್ಲ. ಆಗಸ್ಟ್ 14 ರವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತೆ ಎಂದು ದ.ಕ‌ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *