ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ| ಪಾನೀಯದಲ್ಲಿ ಅಮಲು ಪದಾರ್ಥ ನೀಡಿ ಕೃತ್ಯ

ಸಮಗ್ರ ನ್ಯೂಸ್: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿಗೆ ನಿದ್ರಾಜನಕ ಬೆರೆಸಿದ ಪಾನೀಯ ಕುಡಿಸಿದ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಗಾಝಿಯಾಬಾದ್ ಜಿಲ್ಲೆಯ ಮೋದಿ ನಗರದಲ್ಲಿ ನಡೆದಿದೆ. ಆರೋಪಿಗಳಾದ ಶೇಖರ್, ಕೃಷ್ಣ ಮತ್ತು ಅರ್ಜುನ್ ಎಂಬವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

. Ad Widget . Ad Widget . Ad Widget .

ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ರವಿವಾರ ರಾತ್ರಿ ಹುಟ್ಟುಹಬ್ಬದ ಪಾರ್ಟಿಯೊಂದಕ್ಕೆ ಹೋಗಿದ್ದಾಗ ಆಕೆಗೆ ನಿದ್ರಾಜನಕ ಬೆರೆಸಿದ ಪಾನೀಯ ನೀಡಲಾಗಿದೆ. ಬಳಿಕ ವ್ಯಕ್ತಿಯೊಬ್ಬ ಆಕೆಯನ್ನು ಕೊಠಡಿಗೆ ಕರೆದೊಯ್ದು ತನ್ನ ಸ್ನೇಹಿತರನ್ನೂ ಕರೆದು ಒಬ್ಬರ ಬಳಿಕ ಮತ್ತೊಬ್ಬರಂತೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಯುವತಿಯನ್ನು ವೈದ್ಯಕೀಯ ತಪಾಸಣೆಗೆ ಗುರಿಪಡಿಸಲಾಗಿದ್ದು, ಸಾಮೂಹಿಕ ಅತ್ಯಾಚಾರ ನಡೆದಿರುವುದನ್ನು ವೈದ್ಯಕೀಯ ವರದಿ ದೃಢಪಡಿಸಿದೆ. ಆರೋಪಿಗಳಾದ ಶೇಖರ್, ಕೃಷ್ಣ ಮತ್ತು ಅರ್ಜುನ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಗ್ರಾಮೀಣ ಎಎಸ್ಪಿ ಐರಾಜ್ ರಾಜಾ ಹೇಳಿದ್ದಾರೆ.

Leave a Comment

Your email address will not be published. Required fields are marked *