ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆಯೊಂದು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.

Ad Widget ... ..

ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಶಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು.

Ad Widget

ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು.

ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ. ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ರಸ್ತೆಯಲ್ಲಿ ಮಂಡಿ ತನಕ ನೀರು ನಿಂತಿತ್ತು. ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದ ಅಖಿಲಾ ಅವರು ಸ್ಕೂಟರ್ ನೀರು ಹೆಚ್ಚಿದ್ದರಿಂದ ಇದ್ದಕ್ಕಿದ್ದಂತೆ ಆಫ್ ಆಗಿದೆ.

ಈ ವೇಳೆ ಕೆಳಗೆ ಬೀಳುತ್ತಿದ್ದ ಅಖಿಲಾ ಸಹಾಯಕ್ಕೆ ಬಲ ಭಾಗದಲ್ಲಿಯೇ ಇದ್ದ ಎಲೆಕ್ಟ್ರಿಕಲ್ ಪೋಲ್ ಮುಟ್ಟಿದ್ದಾರೆ.

ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾರೆ

Leave a Comment

Your email address will not be published. Required fields are marked *