ಮಾನವೀಯತೆ ಮೆರೆದ ಸಿಎಂ ಬೊಮ್ಮಾಯಿ| ದಿ.ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್ ಸಿ‌ ಹುದ್ದೆಯ ಕೃಪೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿಯವರು ಅವರು ಕೆಲ ದಿನಗಳ ಹಿಂದೆ ದಿಢೀರ್ ಹೃದಯಾಘಾತಗೊಂಡು ನಿಧನರಾಗಿದ್ದರು.

Ad Widget ... ..

ಇಂತಹ ಅವರ ಅಕಾಲಿಕ ನಿಧನದಿಂದಾಗಿ ಕಂಗಾಲಾಗಿದ್ದ ಕುಟುಂಬಕ್ಕೆ ಮಾನವೀಯತೆ ನೆಲೆಯಲ್ಲಿ, ಮೃತ ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆಯನ್ನು ನೀಡಿ ಆದೇಶಿಸಿದ್ದಾರೆ.

Ad Widget

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಯವರ ಸಚಿವಾಲಯಕ್ಕೆ 115 ಗ್ರೂಪ್-ಸಿ ಗುತ್ತಿಗೆ ಹುದ್ದೆಗಳನ್ನು ನೇಮಕಕ್ಕೆ ಆದೇಶಿಸಲಾಗಿತ್ತು. ಈ ಹುದ್ದೆಗಳಲ್ಲಿ ಒಂದು ಹುದ್ದೆಯ ನೇಮಕಾತಿ ಬಾಕಿ ಉಳಿದಿತ್ತು. ಆ ಹುದ್ದೆಗೆ ಶ್ರೀಮತಿ ದೀಪ ಗುರುಲಿಂಗಸ್ವಾಮಿ ಹೆಚ್ ಬಿ ನೇಮಕ ಮಾಡಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ.

Leave a Comment

Your email address will not be published. Required fields are marked *