ಸುಳ್ಯ: ಬೈಕ್-ರಿಕ್ಷಾ ನಡುವೆ ಭೀಕರ ಅಪಘಾತ| ಬೈಕ್ ಸವಾರ ಸಾವು, ಮತ್ತೊಬ್ಬ ಗಂಭೀರ

ಸಮಗ್ರ ನ್ಯೂಸ್: ಬೈಕ್ ಮತ್ತು‌ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಜಖಂಗೊಂಡ ಘಟನೆ ಮಾಣಿ- ಮೈಸೂರು‌ ರಾ.ಹೆದ್ದಾರಿಯ ಸುಳ್ಯ‌ ಸಮೀಪದ ಪರಿವಾರಕಾನ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಕೆವಿಜಿ ಐಟಿಐ ವಿದ್ಯಾರ್ಥಿ ಪ್ರತೀಕ್ ಎಂದು ಗುರುತಿಸಲಾಗಿದೆ.

Ad Widget ... ..

ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಮಗ ಪ್ರತೀಕ್ ಇಂದು ಬೆಳಿಗ್ಗೆ ಕಲ್ಲುಗುಂಡಿಯಿಂದ ರಾಘವೇಂದ್ರ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ತೇಜಸ್ ಎಂಬ ಯುವಕನ ಜೊತೆ ಬೈಕ್‌ನಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ ಪರಿವಾರಕಾನದ ತಿರುವೊಂದರಲ್ಲಿ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆಯಿತು.

Ad Widget

ಪರಿಣಾಮವಾಗಿ ತೀವ್ರ ಜಖಂಗೊಂಡ ಬೈಕ್ ಸವಾರರಿಬ್ಬರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದು, ಪ್ರತೀಕ್ ಕೊನೆಯುಸಿರೆಳೆದಿದ್ದಾರೆ. ತೀವ್ರ ಜಖಂ ಗೊಂಡಿರುವ ತೇಜಸ್‌ರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *