ಲೈಂಗಿಕ ದೌರ್ಜನ್ಯ ಪ್ರಕರಣ| ಮುರುಘಾ ಶರಣರ ಮೂರನೇ ಎಪ್ಐಆರ್ ದಾಖಲು

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸರು ಮಂಗಳವಾರ ಮಠಾಧೀಶರ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಿದ್ದಾರೆ.

Ad Widget ... ..

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ, ಪೊಲೀಸರು ಮಠಾಧೀಶರು, ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ಮತ್ತು ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

ಮಠವು ನಡೆಸುತ್ತಿರುವ ವಸತಿ ನಿಲಯದ ಆವರಣದಲ್ಲಿ ಪತ್ತೆಯಾದ ಐದು ವರ್ಷದ ಬಾಲಕಿ ಮತ್ತು 17 ವರ್ಷದ ಬಾಲಕಿಯ ವಿವರಗಳನ್ನು ಮಠವು ಉದ್ದೇಶಪೂರ್ವಕವಾಗಿ ಮರೆಮಾಚಿದೆ ಮತ್ತು ಈ ಮೂಲಕ ಬಾಲನ್ಯಾಯ ಕಾಯ್ದೆಯ ಸೆಕ್ಷನ್ 32 ಅನ್ನು ಉಲ್ಲಂಘಿಸಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ದೂರಿನಲ್ಲಿ ಆರೋಪಿಸಿದೆ.

Leave a Comment

Your email address will not be published. Required fields are marked *