ಸುಳ್ಯ:ಬೈಕ್-ಜೀಪು ಅಪಘಾತ|ಸವಾರ ಗಂಭೀರ

ಸಮಗ್ರ ನ್ಯೂಸ್: ಬೈಕ್, ಜೀಪು ಅಪಘಾತದಿಂದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಗ್ರಾಮದ ಬಿಳಿಯಾರು ಪೆಟ್ರೋಲ್ ಬಂಕ್ ಬಳಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

Ad Widget ... ..

ಸಂಪಾಜೆಯ ಕಲ್ಲುಗುಂಡಿ ಕಡೆಯಿಂದ ಸುಳ್ಯ ಕಡೆಗೆ ಧನಂಜಯ ಎಂಬ ಯುವಕ ಬೈಕಿನಲ್ಲಿ ಬರುತ್ತಿರುವಾಗ ಸುಳ್ಯ ಕಡೆಯಿಂದ ತೊಡಿಕಾನ ಕಡೆಗೆ ಹರೀಶ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಜೀಪು ಬಸ್ಸನ್ನು ಓವರ್ ಟೆಕ್ ಮಾಡುವ ಸಂದರ್ಭದಲ್ಲಿ ವಿರುದ್ದ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದಿದೆ.

Ad Widget

ಇನ್ನು ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವಂತೆ ಸುಳ್ಯ ಸರಕಾರಿ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದು, ಅದರಂತೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

Leave a Comment

Your email address will not be published. Required fields are marked *