ಸಮಗ್ರ ನ್ಯೂಸ್: ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್ನ ತಪ್ಪೆ ಸಿಪಾಹ್ನಲ್ಲಿ ನಡೆದಿದೆ.
ಗಾಯಗೊಂಡವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ತಿಳಿಸಿವೆ.
ಟ್ರಕ್ ಡ್ರೈವರ್ ತಪ್ಪು ದಾರಿಯಲ್ಲಿ ಬಂದ ಕಾರಣ ಬಸ್ಗೆ ಡಿಕ್ಕಿಯಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಹೇಳಲಾಗಿದೆ.
ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

















