ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಲ್ಲಿ ಇಂದು ಐದನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟರೂ ಪ್ರತಿಭಟನೆಗಳು ಕಮ್ಮಿಯಾಗಿಲ್ಲ.

Ad Widget ... ..

ಇಂದು ಕೂಡ ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಕೊಂಡಸಕೊಪ್ಪ, ಬಸ್ತವಾಡ ಬಳಿ 11 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 2 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ.

Ad Widget

ಲವ್ ಜಿಹಾದ್ ವಿರುದ್ಧ ವಿಶೇಷ ಪೊಲೀಸ್ ದಳ ಸ್ಥಾಪಿಸಲು ಆಗ್ರಹಿಸಲಿವೆ. ಹಿಂದೂ ಜನ ಜಾಗೃತಿ ಸಮಿತಿ ಗೋವಾದಿಂದ ಪ್ರತಿಭಟನೆ ನಡೆಸಲಿದೆ.

ಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಒಂದು ಲಕ್ಷ ಪರಿಹಾರಕ್ಕಾಗಿ ಆಗ್ರಹಿಸಿ ಸ್ವಾಭಿಮಾನಿ ರೈತ ಸಂಘ ಪ್ರತಿಭಟನೆ ನಡೆಸಲಿದೆ. ವಸತಿ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಹೋರಾಟ ನಡೆಯಲಿದೆ.

ನೇರಪ್ರಸಾರಕ್ಕಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ| ಕೃಪೆ : ಡಿಡಿ ಚಂದನ

Leave a Comment

Your email address will not be published. Required fields are marked *