ಒಂಟಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಮೂವರು ಸಹೋದರಿಯರು

ಸಮಗ್ರ ನ್ಯೂಸ್: ಒಂಟಿ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Ad Widget ... ..

ರಂಜಿತಾ (24), ಬಿಂದು (21), ಚಂದನ (18) ಆತ್ಮಹತ್ಯೆಗೆ ಶರಣಾದ ಸಹೋದರಿಯರಾಗಿದ್ದಾರೆ. ಈ ವಿಷಯ ಗುರುವಾರ (ಜ.19) ಬೆಳಕಿಗೆ ಬಂದಿದೆ. ಅನೇಕ ವರ್ಷಗಳ ಹಿಂದೆ ಪೋಷಕರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಂದಿನಿಂದ ಅಜ್ಜಿ ಜತೆಯಲ್ಲಿ ಇವರು ವಾಸವಿದ್ದರು.

Ad Widget

ಇತ್ತೀಚೆಗೆ ಅಜ್ಜಿ ಕೂಡ ಮೃತಪಟ್ಟಿದ್ದರು. ಅಜ್ಜಿ ಮರಣದ ಬಳಿಕ ಮಾನಸಿಕ ಖಿನ್ನತೆಗೆ ಇವರು ಒಳಗಾಗಿದ್ದರು ಎನ್ನಲಾಗಿದೆ. ಕಿಬ್ಬನಹಳ್ಳಿ ಬಳಿಯ ಗಾರ್ಮೆಂಟ್ಸ್‌ನಲ್ಲಿ ಇಬ್ಬರು ಸಹೋದರಿಯರು ಕೆಲಸ ಮಾಡುತ್ತಿದ್ದರು. 9 ದಿನಗಳ ಹಿಂದೆ ಒಂಟಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶವ ಕೊಳೆತು ವಾಸನೆ ಬಂದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *