ಒಡಿಶಾ ಆರೋಗ್ಯ ಸಚಿವರ ಎದೆಗೆ ಗುಂಡಿಕ್ಕಿದ ದುಷ್ಕರ್ಮಿಗಳು| ಸಚಿವ ನಬಾದಾಸ್ ಸ್ಥಿತಿ‌ ಚಿಂತಾಜನಕ

ಸಮಗ್ರ ನ್ಯೂಸ್: ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡು ಎದೆಗೆ ಬಿದ್ದಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ.

Ad Widget ... ..

ಅನಾಮಿಕರು ವ್ಯಕ್ತಿಗಳು ಹಾರಿಸಿದ ಗುಂಡು ಸಚಿವರ ಎದೆ ಹೊಕ್ಕಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಸಚಿವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಜರಾಜನಗರಕ್ಕೆ ತೆರಳುತ್ತಿದ್ದಾಗ ದಾಳಿ ನಡೆದಿದೆ.

Ad Widget

ನಬಾ ದಾಸ್ ಅವರು ವಾಹನದಿಂದ ಇಳಿಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಂಡಿನ ದಾಳಿಯ ಹಿಂದಿನ ನಿಖರವಾದ ಕಾರಣ ತಿಳಿದುಬಂದಿಲ್ಲ. ರಕ್ತದ ಮಡುವಿನಲ್ಲಿ ಬಿದ್ದಿದ್ದ ದಾಸ್​ರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಗುಂಡಿನ ದಾಳಿಯ ನಂತರ ಬಿಜೆಡಿ ಕಾರ್ಯಕರ್ತರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದು, ಘಟನಾ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ.

Leave a Comment

Your email address will not be published. Required fields are marked *