Breaking|ಮಂಗಳೂರು: ಕಾಲೇಜು ಮೇಲ್ಚಾವಣಿ ಕುಸಿತ; ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಅಬ್ಬರದ ಮಳೆಯಾಗುತ್ತಿದ್ದು, ತಲಪಾಡಿಯಲ್ಲಿರುವ ಕಾಲೇಜಿನ ಮೇಲ್ಚಾವಣಿ ಕುಸಿದಿರುವ ಘಟನೆ ನಡೆದಿದೆ.

Ad Widget ... ..

ತಲಪಾಡಿಯಲ್ಲಿರುವ ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಆರು ಮಹಡಿಯ ಕಾಲೇಜಿನ ಅಳವಡಿಸಲಾಗಿದ್ದ ಶೀಟ್ ಭಾರೀ ಮಳೆ, ಗಾಳಿಗೆ ಕುಸಿದು ಬಿದ್ದಿದೆ. ಮಳೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಣೆ ಮಾಡಿರುವುದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

Ad Widget

ಮಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಬುಧವಾರ ಮತ್ತು ಗುರುವಾರ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *