ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಕೊಡವ ನ್ಯಾಷನಲ್ ಕೌನ್ಸಿಲ್ ನಿಯೋಗ

ಸಮಗ್ರ ನ್ಯೂಸ್:‌ ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

Ad Widget ... ..

ಶಾಸಕ ಎ. ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ನಿಯೋಗವು ಜು.15 ರಂದು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಕೊಡಗರು ಎಂದು ನಮೂದಾಗಿರುವ ಕೊಡವ ಸಮುದಾಯದ ಹೆಸರನ್ನು ಕೊಡವ ಎಂದು ತಿದ್ದುಪಡಿ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಲು ಕೂಡ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕೊಡವ ನ್ಯಾಷನಲ್ ಕೌನ್ಸಿಲ್ ನ ಎನ್.ಯು ನಾಚಪ್ಪ ಅವರ ನೇತೃತ್ವದ 30 ಜನರನ್ನೊಳಗೊಂಡ ನಿಯೋಗ ಭೇಟಿ ಮಾಡಿದೆ.

Ad Widget

Leave a Comment

Your email address will not be published. Required fields are marked *