ಹಾಸನ: ಜೋಕಾಲಿ ಆಡುವಾಗ ಕುತ್ತಿಗೆಗೆ ಸೀರೆ ಬಿಗಿದು ಬಾಲಕಿ ಸಾವು

ಸಮಗ್ರ ನ್ಯೂಸ್: ಜೋಕಾಲಿ ಆಡಲು ಹೋಗಿ ಬಾಲಕಿ ಪ್ರಾಣ ಕಳೆದುಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಕುಣಿಕೇರಿ ಗ್ರಾಮದಲ್ಲಿ ನಡೆದಿದೆ.

. Ad Widget . Ad Widget

ಬಸವರಾಜು ಮತ್ತು ಬೇಬಿ ದಂಪತಿಯ ಪುತ್ರಿ ಸಾನಿತ (9) ಮೃತಪಟ್ಟ ದುರ್ದೈವಿಯಾಗಿದ್ದು, ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಒಳಗೆ ಸೀರೆಯಲ್ಲಿ ಜೋಕಾಲಿ ಆಡುಲು ಸೀರೆ ಕಟ್ಟಿದ್ದು, ಅದರಲ್ಲಿ ಆಡುವ ಸಂದರ್ಭದಲ್ಲಿ ಆಯತಪ್ಪಿ ಕುತ್ತಿಗೆಗೆ ಸೀರೆ ಬಿಗಿದು ಬಾಲಕಿ ಸಾವನ್ನಪ್ಪಿದ್ದಾಳೆ. ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *