ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ

ಬೆಂಗಳೂರು: ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಹತ್ಯೆ ಮಾಡಲಾಗಿದೆ. ಛಲವಾದಿಪಾಳ್ಯ ಕಾರ್ಪೊರೇಟ್ ಆಗಿದ್ದ ರೇಖಾ ಕದಿರೇಶ್ ಅವರನ್ನು ಸಹಚರರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Ad Widget ... ..

ರೇಖಾ ಕದಿರೇಶ್ ಮನೆ ಮುಂದೆಯೇ ಇಂದು ಹಲ್ಲೆ ನಡೆದಿತ್ತು. ಮನೆಯ ಒಳಗಡೆ ಇದ್ದ ರೇಖಾ ಅವರನ್ನು ಹೊರಗೆ ಕರೆದು ಮಾರಕ ಅಸ್ತ್ರಗಳಿಂದ ಹಲ್ಲೆ ನಡೆದಿತ್ತು. ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

Ad Widget

ಛಲವಾದಿ ಪಾಳ್ಯದ ಬಿಜೆಪಿ ಪಾಲಿಕೆ ಸದಸ್ಯರಾಗಿದ್ದ ರೇಖಾ ಅವರ ಪತಿ ಕದಿರೇಶ್ ಅವರನ್ನು 2018ರಲ್ಲಿ ಹಾಡಹಗಲೇ ಕಾಟನ್‍ಪೇಟೆಯ ಅಂಜಿನಪ್ಪ ಗಾರ್ಡನ್ ನಲ್ಲಿ ಕೊಲೆ ಮಾಡಲಾಗಿತ್ತು.

Leave a Comment

Your email address will not be published. Required fields are marked *