ಮಂಗಳೂರು:ಕಾರು ಬೆಂಕಿಗಾಹುತಿ| ಚಾಲಕ ಅಪಾಯದದಿಂದ ಪಾರು

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಈ ವೇಳೆ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಬೆಂಕಿಗಾಹುತಿಯಾದ ಘಟನೆ ಜ. 31ರಂದು ತಡರಾತ್ರಿ ನಗರದ ಹೊರವಲಯದ ಕುಡುಪು ಬೈತುರ್ಲಿ ಜಂಕ್ಷನ್ ಸಮೀಪ ನಡೆದಿದೆ.

Ad Widget ... ..

ಕಾರು ಚಾಲಕ ಕರಣ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕುಡುಪು ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಅದೇ ದಾರಿಯಲ್ಲಿ ಹೋಗುತ್ತಿದ್ದ ಲಾರಿಯವರು ನಿಲ್ಲಿಸಿ ಹೊರಗೆಳೆದಿದ್ದಾರೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಬೆಂಕಿ ಶಮನ ಕಾರ್ಯಾಚರಣೆ ನಡೆಸಿದ್ದಾರೆ. ಕಾರು ಸಂಪೂರ್ಣ ಹೊತ್ತಿ ಉರಿದಿದೆ.

Ad Widget

Leave a Comment

Your email address will not be published. Required fields are marked *