ಸಂಪಾಜೆ: ಕಾರು-ಟ್ಯಾಂಕರ್ ನಡುವೆ ಭೀಕರ ಅಪಘಾತ| ಪವಾಡಸದೃಶ ಪಾರಾದ ಪ್ರಯಾಣಿಕರು

ಸಮಗ್ರ ನ್ಯೂಸ್: ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ‌ ಅಪಘಾತದಲ್ಲಿ ಕಾರು ಸಂಪೂರ್ಣ ನುಚ್ಚು ನೂರಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು‌ ಪವಾಡ ಸದೃಶ್ಯ ಪಾರಾದ ಘಟನೆ ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಗೂನಡ್ಕದಲ್ಲಿ ಸಂಭವಿಸಿದೆ.

Ad Widget ... ..

ಮಡಿಕೇರಿ ಕಡೆಯಿಂದ ಬರುತ್ತಿದ್ದ ಶಿಪ್ಟ್ ಕಾರು ಮತ್ತು ಸುಳ್ಯ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಮಧ್ಯೆ ಫೆ.4 ರಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನ ಇಂಜಿನ್ ಕಾರಿನಿಂದ‌ ಬೇರ್ಪಟ್ಟು ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿ‌ ಪ್ರಯಾಣಿಸುತ್ತಿದ್ದ ಕಾಸರಗೋಡು ಮೂಲದ‌ ಐದು ಮಂದಿ ಯುವಕರು ಪವಾಡ ಸದೃಶ್ಯ ಪಾರಾಗಿದ್ದಾರೆ.

Ad Widget

Leave a Comment

Your email address will not be published. Required fields are marked *