ಉಡುಪಿ: ಅಪಹರಣಕ್ಕೊಳಗಾದ ಮಗು ರಕ್ಷಣೆ | ಆರೋಪಿ ಪೊಲೀಸ್ ವಶಕ್ಕೆ

ಉಡುಪಿ: ಕರಾವಳಿ ಬೈಪಾಸ್‌‌ ಬಳಿಯಿಂದ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ ಮಗುವನ್ನು ಉಡುಪಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಆರೋಪಿ ಸಹಿತ ಕುಮುಟಾದಲ್ಲಿ ಪತ್ತೆ ಮಾಡಿದ್ದಾರೆ.

Ad Widget ... ..

ಆರೋಪಿಯನ್ನು ಬಾಗಲಕೋಟೆಯ ಪರಶು ಎಂದು ಗುರುತಿಸಲಾಗಿದೆ. ಕುಮುಟಾದಲ್ಲಿ ರೈಲ್ವೆ ಪೊಲೀಸರ ಸಹಕಾರದೊಂದಿಗೆ ಪತ್ತೆ ಹಚ್ಚಿ, ಮಗು ಶಿವರಾಜ್‌ (2.5 ವರ್ಷ) ಹಾಗೂ ಆರೋಪಿಯನ್ನು ಇಂದು ಬೆಳಗ್ಗೆ ಪೊಲೀಸರು ಉಡುಪಿಗೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.

Ad Widget

ಭಾನುವಾರ ಬೆಳಗ್ಗೆ ಪರಶು ಮಗುವನ್ನು ಅಪಹರಿಸಿ ಕರಾವಳಿ ಬೈಪಾಸ್‌ನಿಂದ ಸಿಟಿಬಸ್‌‌ನಲ್ಲಿ ಪ್ರಯಾಣಿಸಿ ಸಂತೆಕಟ್ಟೆಯಲ್ಲಿ ಇಳಿದಿದ್ದನು. ಸಂತೆಕಟ್ಟೆಯಲ್ಲಿ ಆತ ಮಗುವಿನೊಂದಿಗೆ ಬಸ್‌ನಲ್ಲಿ ಭಟ್ಕಳಕ್ಕೆ ಪ್ರಯಾಣಿಸಿದ್ದಾನೆ. ನಂತರ ಅಲ್ಲಿಂದ ದಾಂಡೇಲಿಗೆ ಹೋಗುವ ರೈಲಿಗೆ ಹತ್ತಿದ್ದು, ನಂತರ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾನೆ.

ಈ ಬಗ್ಗೆ ಉಡುಪಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಮೇರೆಗೆ ಭಟ್ಕಳ, ಕುಮಟಾ ಸೇರಿದಂತೆ ಕಾರವಾರ ಪೊಲೀಸರು ಹುಡುಕಾಟ ನಡೆಸಿದ್ದು, ರಾತ್ರಿ ವೇಳೆ ಕುಮಟಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *