ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ ಎಂಬಾತ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ. ಇತ ಹಾಫ್​ ಮರ್ಡರ್​ ಮಾಡಿ ಜೈಲಿಗೆ ಹೋಗಿ ಬೇಲ್​ ಮೇಲೆ ಆಚೆ ಬಂದಿದ್ದ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ತನ್ನ ತಾತನ ಮನೆಯಲ್ಲಿ ವಾಸವಿದ್ದ. ನಿನ್ನೆ ಸ್ನೇಹಿತರ ಜೊತೆ ಆಚೆ ಹೋಗಿದ್ದವನನ್ನ ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದಿದ್ದಾರೆ.

Ad Widget ... ..

ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ ಮೃತ ದರ್ಶನ್ ಸ್ನೇಹಿತರು, ಫೆ.15 ರಾತ್ರಿ ಪುನಃ ಬಂದಿದ್ದಾರೆ. ಈ ಹಿನ್ನಲೆ ಕಾರಿನಲ್ಲಿ ಬಂದ ಸ್ನೇಹಿತರ ಜೊತೆ ದರ್ಶನ್ ಹೋಗಿದ್ದನಂತೆ. ತಾತನಿಗೆ ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್​ನಲ್ಲಿ ಮಲಗುತ್ತೇನೆ ಎಂದು ಹೇಳಿ ಹೋಗಿದ್ದಾನೆ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನ ದರ್ಶನ್ ತಾತ ಕೂಡ ನೋಡಿದ್ದರು. ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್​ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು. ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.ಯಾರು ಕೊಲೆಗೈದಿದ್ದಾರೆ ಎಂಬ ಮಾಹಿತಿ ಸಿಗಲಿಲ್ಲ ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದು ತನಿಖೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *